ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಂ. ಶಶಿಧರ್ ಮಾತನಾಡಿ, ‘ನಮ್ಮ ಪಕ್ಷವು ದುಡಿಯುವ ಜನರ ಹೋರಾಟದ ಧ್ವನಿಯಾಗಿದೆ. ನಾಗರಿಕ ಹಕ್ಕುಗಳ ಹಾಗೂ ಪ್ರಜಾತಾಂತ್ರಿಕ ಮೌಲ್ಯಗಳ ಹರಣಗಳ ವಿರುದ್ಧ, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು, ಹಾಗೂ ಮಹಿಳೆಯರ ಸಮಸ್ಯೆಗಳ ವಿರುದ್ಧ ಪಕ್ಷ ಅವಿರತವಾಗಿ ಹೋರಾಟ ಮಾಡಿಕೊಂಡು ಬಂದಿದೆ. ಜನರು ಚುನಾವಣೆಯಲ್ಲಿ ಬೆಂಬಲಿಸಿ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು’ ಎಂದರು.