ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸುಧಾ ದೇವರಾಜು ನಾಮಪತ್ರ ಸಲ್ಲಿಸಿದ್ದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮಾ ಶಿವಕುಮಾರ್ ಮತ್ತು ವಸಂತ ನಾಮಪತ್ರ ಸಲ್ಲಿಸಿದ್ದರು. ಕೊನೆಗೆ ವಸಂತ ನಾಮಪತ್ರ ವಾಪಸ್ ಪಡೆದರು. ಹಾಗಾಗಿ, ಅವಿರೋಧ ಆಯ್ಕೆ ನಡೆಯಿತು. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಂಕರ್ ಚುನಾವಣಾಧಿಕಾರಿಯಾಗಿದ್ದರು. ಸಹಾಯಕ ಚುನಾವಣಾಧಿಕಾರಿಯಾಗಿ ಪಿಡಿಒ ಮಂಜುನಾಥ್, ಕಾರ್ಯದರ್ಶಿ ದೇವರಾಜು ಕಾರ್ಯ ನಿರ್ವಹಿಸಿದರು.