<p><strong>ಚನ್ನಪಟ್ಟಣ</strong>: ಕಬ್ಬು ಬೆಳೆಗಾರರು ಕಬ್ಬಿಗೆ ನಿಗದಿತ ಬೆಲೆ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಆಹೋರಾತ್ರಿ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತಸಂಘದ ಪದಾಧಿಕಾರಿಗಳು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಗಾಂಧಿಭವನದ ಮುಂಭಾಗದಿಂದ ತಾಲ್ಲೂಕು ಕಚೇರಿವರೆಗೂ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಜಾಥಾ ನಡೆಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಕಬ್ಬು ಬೆಳೆಗಾರರ ಹಿತ ಕಾಯಲು ಆಗದ ಸರ್ಕಾರ ಹಾಗೂ ರಾಜಕಾರಣಿಗಳು ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಿತಕಾಯಲು ಮುಂದಾಗುತ್ತಿದ್ದಾರೆ. ಇಂತಹ ರೈತ ವಿರೋಧಿ ಸರ್ಕಾರ ವಿರುದ್ಧ ಮುಂದಿನ ದಿನಗಳಲ್ಲಿ ಸಾರ್ವಜನಿಕರು ದಂಗೆ ಏಳುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದರು.</p>.<p>ರೈತ ಸಂಘದ ಹಿರಿಯ ಮುಖಂಡ ಕೆ.ಎನ್.ರಾಜು ಮಾತನಾಡಿ, ಗ್ಯಾರಂಟಿ ಕನಸಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರೈತರ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಪದಾಧಿಕಾರಿ ಲಕ್ಷ್ಮಣ್, ರೈತಸಂಘದ ಪದಾಧಿಕಾರಿಗಳಾದ ಕೋದಂಡರಾಮು, ಸಿದ್ದರಾಜು, ಪುಟ್ಟಣ್ಣ, ಕೃಷ್ಣ, ವಿಶ್ವನಾಥ್, ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ಕಬ್ಬು ಬೆಳೆಗಾರರು ಕಬ್ಬಿಗೆ ನಿಗದಿತ ಬೆಲೆ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಆಹೋರಾತ್ರಿ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತಸಂಘದ ಪದಾಧಿಕಾರಿಗಳು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಗಾಂಧಿಭವನದ ಮುಂಭಾಗದಿಂದ ತಾಲ್ಲೂಕು ಕಚೇರಿವರೆಗೂ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಜಾಥಾ ನಡೆಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಕಬ್ಬು ಬೆಳೆಗಾರರ ಹಿತ ಕಾಯಲು ಆಗದ ಸರ್ಕಾರ ಹಾಗೂ ರಾಜಕಾರಣಿಗಳು ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಿತಕಾಯಲು ಮುಂದಾಗುತ್ತಿದ್ದಾರೆ. ಇಂತಹ ರೈತ ವಿರೋಧಿ ಸರ್ಕಾರ ವಿರುದ್ಧ ಮುಂದಿನ ದಿನಗಳಲ್ಲಿ ಸಾರ್ವಜನಿಕರು ದಂಗೆ ಏಳುವ ದಿನಗಳು ದೂರವಿಲ್ಲ ಎಂದು ಎಚ್ಚರಿಸಿದರು.</p>.<p>ರೈತ ಸಂಘದ ಹಿರಿಯ ಮುಖಂಡ ಕೆ.ಎನ್.ರಾಜು ಮಾತನಾಡಿ, ಗ್ಯಾರಂಟಿ ಕನಸಿನಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರೈತರ ಹಿತಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್, ಪದಾಧಿಕಾರಿ ಲಕ್ಷ್ಮಣ್, ರೈತಸಂಘದ ಪದಾಧಿಕಾರಿಗಳಾದ ಕೋದಂಡರಾಮು, ಸಿದ್ದರಾಜು, ಪುಟ್ಟಣ್ಣ, ಕೃಷ್ಣ, ವಿಶ್ವನಾಥ್, ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>