<p><strong>ಕೋಡಿಹಳ್ಳಿ (ಕನಕಪುರ):</strong> ಕುಟುಂಬದ ಸದಸ್ಯರಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸಲು ಹಾಗೂ ಸಮಾಜದಲ್ಲಿ ರೂಡಿಯಲ್ಲಿರುವ ಹಬ್ಬ ಆಚರಣೆಗಳನ್ನು ಪರಿಚಯಿಸಲು ಶಾಲೆಗಳಲ್ಲಿ ಸೂಪರ್ ಸ್ಯಾಟರ್ಡೇ (ಅದ್ಭುತ ಶನಿವಾರ) ಕಾರ್ಯಕ್ರಮ ಸಹಕಾರಿ’ ಎಂದು ಸರ್ಕಾರಿ ಶಾಲೆ ಶಿಕ್ಷಕಿ ಸೌಭಾಗ್ಯಮ್ಮ ತಿಳಿಸಿದರು.</p>.<p>ಇಲ್ಲಿನ ಕೋಡಿಹಳ್ಳಿ ಹೋಬಳಿ ಪ್ಲಾಂಟೇಷನ್ ಬಳಿಯಿರುವ ಡಿಕೆಎಸ್ ಹಿಪ್ಪೋ ಕ್ಯಾಂಪಸ್ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಶನಿವಾರ ಆಯೋಜನೆ ಮಾಡಿದ್ದ ಸೂಪರ್ ಸ್ಯಾಟರ್ಡೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶಕ್ಕಾಗಿ ಶ್ರಮಿಸಿದ ಮಹಾತ್ಮರು, ಪೂಜ್ಯರ ಬಗ್ಗೆ ಮಕ್ಕಳಿಗೆ ನಾವು ಚಿಕ್ಕಂದಿನಿಂದಲೇ ತಿಳಿಸಿಕೊಡಲು ಜಯಂತಿ ಕಾರ್ಯಕ್ರಮ, ಅದೇ ರೀತಿ ಧಾರ್ಮಿಕ ಹಬ್ಬಗಳ ಆಚರಣೆಗಳನ್ನು ಮಾಡಿ ಅವುಗಳನ್ನು ಪರಿಚಯಿಸಿ ಕೊಡಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇವೆಲ್ಲವೂ ಸಹಕಾರಿಯಾಗಲಿವೆ’ ಎಂದರು.</p>.<p>ಕ್ರಿಸ್ಮಸ್ ಹಬ್ಬದ ನೃತ್ಯ ಪ್ರದರ್ಶನ ನಡೆಯಿತು. ಶಿಕ್ಷಕ ಉನ್ನೀಸ್ ಎಂ. ಸೋಮನ್ ಸಾಂತಾಕ್ಲಾಸ್ ವೇಷಧರಿಸಿ ಮಕ್ಕಳನ್ನು ರಂಜಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ತಾಯಿ ಮಮತೆಯ ಪರಿಚಯವಾಗಿ ‘ತಾಯಿಯ ಕೈ ತುತ್ತು’ ಎಂಬ ಕಾರ್ಯಕ್ರಮದಡಿ ತಾಯಂದಿರು ಮಕ್ಕಳಿಗೆ ಕೈ ತುತ್ತು ನೀಡಿದರು.</p>.<p>ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಮುಖಂಡ ಮಹೇಶ್ ಕೆ.ಎಸ್., ತರಬೇತುದಾರರಾದ ರಾಧಾ, ಮುಖ್ಯ ಶಿಕ್ಷಕಿ ಆಂತೋಣಿ ಮೇರಿ, ಸಹ ಶಿಕ್ಷಕಿ ವೀಣಾ, ಆಶಾ, ಅಶ್ವಿನಿ, ಸುಮಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಡಿಹಳ್ಳಿ (ಕನಕಪುರ):</strong> ಕುಟುಂಬದ ಸದಸ್ಯರಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸಲು ಹಾಗೂ ಸಮಾಜದಲ್ಲಿ ರೂಡಿಯಲ್ಲಿರುವ ಹಬ್ಬ ಆಚರಣೆಗಳನ್ನು ಪರಿಚಯಿಸಲು ಶಾಲೆಗಳಲ್ಲಿ ಸೂಪರ್ ಸ್ಯಾಟರ್ಡೇ (ಅದ್ಭುತ ಶನಿವಾರ) ಕಾರ್ಯಕ್ರಮ ಸಹಕಾರಿ’ ಎಂದು ಸರ್ಕಾರಿ ಶಾಲೆ ಶಿಕ್ಷಕಿ ಸೌಭಾಗ್ಯಮ್ಮ ತಿಳಿಸಿದರು.</p>.<p>ಇಲ್ಲಿನ ಕೋಡಿಹಳ್ಳಿ ಹೋಬಳಿ ಪ್ಲಾಂಟೇಷನ್ ಬಳಿಯಿರುವ ಡಿಕೆಎಸ್ ಹಿಪ್ಪೋ ಕ್ಯಾಂಪಸ್ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಶನಿವಾರ ಆಯೋಜನೆ ಮಾಡಿದ್ದ ಸೂಪರ್ ಸ್ಯಾಟರ್ಡೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶಕ್ಕಾಗಿ ಶ್ರಮಿಸಿದ ಮಹಾತ್ಮರು, ಪೂಜ್ಯರ ಬಗ್ಗೆ ಮಕ್ಕಳಿಗೆ ನಾವು ಚಿಕ್ಕಂದಿನಿಂದಲೇ ತಿಳಿಸಿಕೊಡಲು ಜಯಂತಿ ಕಾರ್ಯಕ್ರಮ, ಅದೇ ರೀತಿ ಧಾರ್ಮಿಕ ಹಬ್ಬಗಳ ಆಚರಣೆಗಳನ್ನು ಮಾಡಿ ಅವುಗಳನ್ನು ಪರಿಚಯಿಸಿ ಕೊಡಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇವೆಲ್ಲವೂ ಸಹಕಾರಿಯಾಗಲಿವೆ’ ಎಂದರು.</p>.<p>ಕ್ರಿಸ್ಮಸ್ ಹಬ್ಬದ ನೃತ್ಯ ಪ್ರದರ್ಶನ ನಡೆಯಿತು. ಶಿಕ್ಷಕ ಉನ್ನೀಸ್ ಎಂ. ಸೋಮನ್ ಸಾಂತಾಕ್ಲಾಸ್ ವೇಷಧರಿಸಿ ಮಕ್ಕಳನ್ನು ರಂಜಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ತಾಯಿ ಮಮತೆಯ ಪರಿಚಯವಾಗಿ ‘ತಾಯಿಯ ಕೈ ತುತ್ತು’ ಎಂಬ ಕಾರ್ಯಕ್ರಮದಡಿ ತಾಯಂದಿರು ಮಕ್ಕಳಿಗೆ ಕೈ ತುತ್ತು ನೀಡಿದರು.</p>.<p>ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಮುಖಂಡ ಮಹೇಶ್ ಕೆ.ಎಸ್., ತರಬೇತುದಾರರಾದ ರಾಧಾ, ಮುಖ್ಯ ಶಿಕ್ಷಕಿ ಆಂತೋಣಿ ಮೇರಿ, ಸಹ ಶಿಕ್ಷಕಿ ವೀಣಾ, ಆಶಾ, ಅಶ್ವಿನಿ, ಸುಮಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>