<p><strong>ಮಾಗಡಿ</strong>: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಶಿಕ್ಷಕರು ಸಮೀಕ್ಷೆಗೆ ಗೈರು ಆಗುವ ಮೂಲಕ ಗುರುವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. </p>.<p>ಸಮೀಕ್ಷೆಗೆ ಸರ್ಕಾರ ಸಿದ್ಧ ಪಡಿಸಿರುವ ಆ್ಯಪ್ ಸರಿಯಾಗಿ ಕೆಲಸ ಮಾಡದ ಕಾರಣ ಸಮೀಕ್ಷೆಗೆ ತೊಂದರೆಯಾಗುತ್ತಿದೆ. ಕೂಡಲೇ ತಾಂತ್ರಿಕ ಸಮಸ್ಯೆ ಸರಿಪಡಿಸುವಂತೆ ಶಿಕ್ಷಕರು ತಹಶೀಲ್ದಾರ್ ಶರತ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜೈಪಾಲ್ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಇಂಟರ್ನೆಟ್ ಸಮಸ್ಯೆ ಇದೆ. ಇದರಿಂದ ಮೊಬೈಲ್ ಆ್ಯಪ್ ಸಮರ್ಕವಾಗಿ ಕೆಲಸ ಮಾಡುತ್ತಿಲ್ಲ. ಆಫ್ಲೈನ್ ನಲ್ಲಿ ನಮೂದಿಸಲು ಅವಕಾಶ ನೀಡಬೇಕು. ಗಣತಿ ಸಮಯದಲ್ಲಿ ಯುಎಚ್ಡಿ ಮೂಲಕ ಮನೆ ಗುರುತಿಸಲು ಸಾಧ್ಯವಾಗುತ್ತಿಲ್ಲ. </p>.<p>ಸಮೀಕ್ಷೆ ಸಮಯದಲ್ಲಿ ಒಟಿಪಿ ಸಮಸ್ಯೆ ಎದುರಾಗುತ್ತಿದೆ. ಅಂಗವಿಕಲ ಶಿಕ್ಷಕರು ಹಾಗೂ 55 ವರ್ಷ ದಾಟಿದ ಶಿಕ್ಷಕರಿಗೆ ವಿನಾಯಿತಿ ನೀಡುವುದು ಸೇರಿದಂತೆ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು.</p>.<p>ತಾಲ್ಲೂಕಿನಲ್ಲಿ ಮಾತ್ರವಲ್ಲ, ರಾಜ್ಯದಾದ್ಯಂತ ಆ್ಯಪ್ನಲ್ಲಿ ದೋಷ ಕಂಡು ಬಂದಿದೆ. ಅಧಿಕಾರಿಗಳ ತುರ್ತುಸಭೆ ಕರೆದು ಸಂಜೆ ಒಳಗೆ ಸಮಸ್ಯೆ ಬಗೆಹರಿಸಲಾಗುವುದು. ನಾಳೆಯಿಂದ ಸಮೀಕ್ಷೆ ಎಂದಿನಂತೆ ನಡೆಯಲಿದೆ ಎಂದು ತಹಶೀಲ್ದಾರ್ ಭರವಸೆ ನೀಡಿದರು.</p>.<p>ಸೆ.22ರಿಂದ ಸಮೀಕ್ಷೆ ಆರಂಭವಾಗಿದ್ದರೂ ಆ್ಯಪ್ ಸರಿಯಾಗಿ ಕೆಲಸ ನಿರ್ವಹಿಸದ ಕಾರಣ ಸಮೀಕ್ಷೆ ಕಾರ್ಯಕ್ಕೆ ತೊಡಕು ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಎದುರಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಶಿಕ್ಷಕರು ಸಮೀಕ್ಷೆಗೆ ಗೈರು ಆಗುವ ಮೂಲಕ ಗುರುವಾರ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. </p>.<p>ಸಮೀಕ್ಷೆಗೆ ಸರ್ಕಾರ ಸಿದ್ಧ ಪಡಿಸಿರುವ ಆ್ಯಪ್ ಸರಿಯಾಗಿ ಕೆಲಸ ಮಾಡದ ಕಾರಣ ಸಮೀಕ್ಷೆಗೆ ತೊಂದರೆಯಾಗುತ್ತಿದೆ. ಕೂಡಲೇ ತಾಂತ್ರಿಕ ಸಮಸ್ಯೆ ಸರಿಪಡಿಸುವಂತೆ ಶಿಕ್ಷಕರು ತಹಶೀಲ್ದಾರ್ ಶರತ್ ಕುಮಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜೈಪಾಲ್ ಅವರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಇಂಟರ್ನೆಟ್ ಸಮಸ್ಯೆ ಇದೆ. ಇದರಿಂದ ಮೊಬೈಲ್ ಆ್ಯಪ್ ಸಮರ್ಕವಾಗಿ ಕೆಲಸ ಮಾಡುತ್ತಿಲ್ಲ. ಆಫ್ಲೈನ್ ನಲ್ಲಿ ನಮೂದಿಸಲು ಅವಕಾಶ ನೀಡಬೇಕು. ಗಣತಿ ಸಮಯದಲ್ಲಿ ಯುಎಚ್ಡಿ ಮೂಲಕ ಮನೆ ಗುರುತಿಸಲು ಸಾಧ್ಯವಾಗುತ್ತಿಲ್ಲ. </p>.<p>ಸಮೀಕ್ಷೆ ಸಮಯದಲ್ಲಿ ಒಟಿಪಿ ಸಮಸ್ಯೆ ಎದುರಾಗುತ್ತಿದೆ. ಅಂಗವಿಕಲ ಶಿಕ್ಷಕರು ಹಾಗೂ 55 ವರ್ಷ ದಾಟಿದ ಶಿಕ್ಷಕರಿಗೆ ವಿನಾಯಿತಿ ನೀಡುವುದು ಸೇರಿದಂತೆ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು.</p>.<p>ತಾಲ್ಲೂಕಿನಲ್ಲಿ ಮಾತ್ರವಲ್ಲ, ರಾಜ್ಯದಾದ್ಯಂತ ಆ್ಯಪ್ನಲ್ಲಿ ದೋಷ ಕಂಡು ಬಂದಿದೆ. ಅಧಿಕಾರಿಗಳ ತುರ್ತುಸಭೆ ಕರೆದು ಸಂಜೆ ಒಳಗೆ ಸಮಸ್ಯೆ ಬಗೆಹರಿಸಲಾಗುವುದು. ನಾಳೆಯಿಂದ ಸಮೀಕ್ಷೆ ಎಂದಿನಂತೆ ನಡೆಯಲಿದೆ ಎಂದು ತಹಶೀಲ್ದಾರ್ ಭರವಸೆ ನೀಡಿದರು.</p>.<p>ಸೆ.22ರಿಂದ ಸಮೀಕ್ಷೆ ಆರಂಭವಾಗಿದ್ದರೂ ಆ್ಯಪ್ ಸರಿಯಾಗಿ ಕೆಲಸ ನಿರ್ವಹಿಸದ ಕಾರಣ ಸಮೀಕ್ಷೆ ಕಾರ್ಯಕ್ಕೆ ತೊಡಕು ಉಂಟಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>