<p><strong>ಮಾಗಡಿ:</strong> ಪಟ್ಟಣದ ತಿರುಮಲೆ ತಿರುವೆಂಗಳನಾಥ ರಂಗನಾಥಸ್ವಾಮಿ ಜಾತ್ರೆಯು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರದ್ದಾಗಿದೆ. ಆದರೆ, ಸಾಂಪ್ರದಾಯಿಕವಾಗಿ ಪೂಜಾಧಿಗಳು ನಡೆಯಬೇಕು ಎಂಬ ಉದ್ದೇಶದಿಂದ ಭಾನುವಾರ ಬೆಳಿಗ್ಗೆ ದೇವಾಲಯದ ಪೌಳಿಯ ಒಳಗೆ ಸೂರ್ಯಮಂಡಲೋತ್ಸವ ನಡೆಯಿತು ಎಂದು ತಹಶೀಲ್ದಾರ್ ಬಿ.ಜಿ. ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.</p>.<p>ಸಪ್ತಾಶ್ವಗಳ ಮೇಲೆ ರಥಕ ಅರುಣ, ಅರುಣದೇವನ ಮೇಲೆ ಸೂರ್ಯದೇವರ ಪ್ರಭಾವಳಿ, ಪ್ರಭಾವಳಿಯ ಒಳಗೆ ಉಭಯ ಅಮ್ಮನವರ ಸಹಿತ ರಂಗನಾಥಸ್ವಾಮಿ, ಮುತ್ತಿನ ಮಣಿಗಳ ಅಲಂಕಾರ ನೋಡುಗರಲ್ಲಿ ಭಕ್ತಿಯ ಪರವಶತೆ ಮೂಡಿಸುವಂತಿತ್ತು.</p>.<p>ಶೇಷವಾಹನ ಉತ್ಸವ: ರಂಗನಾಥಸ್ವಾಮಿ ಶೇಷವಾಹನ ಉತ್ಸವ ಸಂಜೆ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿತ್ತು.</p>.<p>ಅರ್ಚಕರು ಮತ್ತು ದೇವಾಲಯದ ಸಿಬ್ಬಂದಿ ಸಾಂಕೇತಿಕವಾಗಿ ಉತ್ಸವ ನಡೆಸಿದರು.ತಿರುವೆಂಗಳನಾಥ ರಂಗನಾಥ ಸ್ವಾಮಿ ಮತ್ತು ಉಭಯ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಿಆದಿಶೇಷನ ಆಭರಣ ತೊಡಿಸಲಾಗಿತ್ತು. ಪುಳಿಯೊಗರೆ, ಪಾನಕ ವಿತರಿಸಲಾಯಿತು. ಶೇಷವಾಹನ ಉತ್ಸವ ದೇಗುಲದ ಪೌಳಿಯ ಒಳಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಪಟ್ಟಣದ ತಿರುಮಲೆ ತಿರುವೆಂಗಳನಾಥ ರಂಗನಾಥಸ್ವಾಮಿ ಜಾತ್ರೆಯು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರದ್ದಾಗಿದೆ. ಆದರೆ, ಸಾಂಪ್ರದಾಯಿಕವಾಗಿ ಪೂಜಾಧಿಗಳು ನಡೆಯಬೇಕು ಎಂಬ ಉದ್ದೇಶದಿಂದ ಭಾನುವಾರ ಬೆಳಿಗ್ಗೆ ದೇವಾಲಯದ ಪೌಳಿಯ ಒಳಗೆ ಸೂರ್ಯಮಂಡಲೋತ್ಸವ ನಡೆಯಿತು ಎಂದು ತಹಶೀಲ್ದಾರ್ ಬಿ.ಜಿ. ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.</p>.<p>ಸಪ್ತಾಶ್ವಗಳ ಮೇಲೆ ರಥಕ ಅರುಣ, ಅರುಣದೇವನ ಮೇಲೆ ಸೂರ್ಯದೇವರ ಪ್ರಭಾವಳಿ, ಪ್ರಭಾವಳಿಯ ಒಳಗೆ ಉಭಯ ಅಮ್ಮನವರ ಸಹಿತ ರಂಗನಾಥಸ್ವಾಮಿ, ಮುತ್ತಿನ ಮಣಿಗಳ ಅಲಂಕಾರ ನೋಡುಗರಲ್ಲಿ ಭಕ್ತಿಯ ಪರವಶತೆ ಮೂಡಿಸುವಂತಿತ್ತು.</p>.<p>ಶೇಷವಾಹನ ಉತ್ಸವ: ರಂಗನಾಥಸ್ವಾಮಿ ಶೇಷವಾಹನ ಉತ್ಸವ ಸಂಜೆ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿತ್ತು.</p>.<p>ಅರ್ಚಕರು ಮತ್ತು ದೇವಾಲಯದ ಸಿಬ್ಬಂದಿ ಸಾಂಕೇತಿಕವಾಗಿ ಉತ್ಸವ ನಡೆಸಿದರು.ತಿರುವೆಂಗಳನಾಥ ರಂಗನಾಥ ಸ್ವಾಮಿ ಮತ್ತು ಉಭಯ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಿಆದಿಶೇಷನ ಆಭರಣ ತೊಡಿಸಲಾಗಿತ್ತು. ಪುಳಿಯೊಗರೆ, ಪಾನಕ ವಿತರಿಸಲಾಯಿತು. ಶೇಷವಾಹನ ಉತ್ಸವ ದೇಗುಲದ ಪೌಳಿಯ ಒಳಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>