ಅದಕ್ಕೆ ಅವರಿಬ್ಬರು ನೀಡಿದ ಪ್ರತಿಕ್ರಿಯೆ ತೃಪ್ತಿದಾಯಕವಾಗಿರಲಿಲ್ಲ. ಪಡಿತರ ದಾಸ್ತಾನು ಬಂದಾಗ ಅಧಿಕಾರಿಗಳು ಅದನ್ನು ಸಮಗ್ರವಾಗಿ ಪರಿಶೀಲಿಸಬೇಕು. ನಿಯಮಿತವಾಗಿ ನ್ಯಾಯಬೆಲೆ ಅಂಗಡಿ ಹಾಗೂ ಸಗಟು ಮಳಿಗೆಗಳಲ್ಲಿನ ದಾಸ್ತಾನು ಎತ್ತುವಳಿ, ವಿತರಣೆ ಹಾಗೂ ಅಂತಿಮ ಶಿಲ್ಕಿನ ಬಗ್ಗೆ ಪರಿಶೀಲನೆ ನಡೆಸಿದ್ದಲ್ಲಿ, ಗೋದಾಮಿನಿಂದ ಅಕ್ಕಿ ಮತ್ತು ರಾಗಿ ಕಳ್ಳತನವಾಗುತ್ತಿರಲಿಲ್ಲ. ನೌಕರರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ವಾಸಿರೆಡ್ಡಿ ಅವರು ಇಬ್ಬರನ್ನು ಅಮಾತು ಮಾಡಿದ್ದಾರೆ.