ಕಳೆದ ಮಾರ್ಚ್ನಲ್ಲಿ ಬೈರಮಂಗಲ ಗ್ರಾ.ಪಂ. ಕಚೇರಿ ಮೇಲೆ ದಾಳಿ ನಡೆಸಿದ್ದ ಬೆಂಗಳೂರು ಪೂರ್ವ ಸೈಬರ್ ಠಾಣೆ ಪೊಲೀಸರು ಅಲ್ಲಿನ ಕಂಪ್ಯೂಟರ್ ಹಾರ್ಡ್ಡಿಸ್ಕ್ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಆರೋಪಿ ರವಿಕುಮಾರ್ ತಲೆಮರೆಸಿಕೊಂಡಿದ್ದು, ನಂತರದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಸರ್ಕಾರ ಈಚೆಗೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿತ್ತು.