ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ: ಭಾವಚಿತ್ರದ ಅದ್ಧೂರಿ ಮೆರವಣಿಗೆ

Published 12 ಜನವರಿ 2024, 7:06 IST
Last Updated 12 ಜನವರಿ 2024, 7:06 IST
ಅಕ್ಷರ ಗಾತ್ರ

ರಾಮನಗರ: ಜನ ಜಾಗೃತಿ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಅವರ ಜನ್ಮದಿನದ ಅಂಗವಾಗಿ, ರಥದಲ್ಲಿ ವಿವೇಕಾನಂದ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿ, ಬೈಕ್ ರ‍್ಯಾಲಿ ನಡೆಸಲಾಯಿತು.

ನಗರದ ರೋಟರಿ ವೃತ್ತದಲ್ಲಿ ಇರುವ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಸಾಧಕಿ ಚಿತ್ರಾ ರಾವ್, ವೇದಿಕೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ಮಾಜಿ ಶಾಸಕ ಕೆ. ರಾಜು, ಬಮೂಲ್ ‌ನಿರ್ದೇಶಕ ಪಿ‌. ನಾಗರಾಜ್ ಸೇರಿದಂತೆ ಹಲವು ಗಣ್ಯರು ಮಾಲಾರ್ಪಣೆ ಮಾಡಿ, ಪೂಜೆ ನೆರವೇರಿಸುವ ಮೂಲಕ ಭಾವಚಿತ್ರ ಮೆರವಣಿಗೆ ಮತ್ತು ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.

ಅಲಿಂದ ಹೊರಟ ಮೆರವಣಿಗೆಯು ಐಜೂರು ವೃತ್ತ, ಹಳೆ ಬಸ್ ನಿಲ್ದಾಣದ ವೃತ್ತ, ಮಾರ್ಕೆಟ್ ರಸ್ತೆ, ಎಂ.ಜಿ. ರಸ್ತೆ, ವಾಟರ್ ಟ್ಯಾಂಕ್ ವೃತ್ತದ ಮಾರ್ಗವಾಗಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂತ್ಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT