<p><strong>ರಾಮನಗರ</strong>: ಗುಜರಾತ್ನ ಗಾಂಧಿನಗರದ ಧ್ಯಾನ್ ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಟೇಕ್ವಾಂಡೊ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ರಾಮನಗರದ ಟೇಕ್ವಾಂಡೊ ಕ್ರೀಡಾಪಟು ಶಾನ್ವಿ ಸತೀಶ್ ಸ್ಪಾರಿಂಗ್ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದಾಳೆ.</p>.<p>ಸ್ಪರ್ಧೆಯ 8–10 ವರ್ಷದೊಳಗಿನವರ 25 ಕೆ.ಜಿ.ಯಿಂದ 30 ಕೆ.ಜಿ ಒಳಗಿನ ತಂಡವನ್ನು ಶಾನ್ವಿ ಪ್ರತಿನಿಧಿಸಿದ್ದಳು. ಸ್ಪರ್ಧೆಯಲ್ಲಿ ಕರ್ನಾಟಕ ಸೇರಿದಂತೆ ತಮಿಳುನಾಡು, ತೆಲಂಗಾಣ, ದೆಹಲಿ, ಗುಜರಾತ್, ಒಡಿಶಾ ಹಾಗೂ ಕೇರಳ ರಾಜ್ಯದ 450ಕ್ಕೂ ಹೆಚ್ಚು ಕ್ರಿಡಾಪಟುಗಳು ಭಾಗವಹಿಸಿದ್ದರು.</p>.<p>ಬೆಂಗಳೂರು ದಕ್ಷಿಣ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಹಾಗೂ ಚೈತ್ರಾ ದಂಪತಿ ಪುತ್ರಿಯಾದ 8 ವರ್ಷದ ಶಾನ್ವಿ, ನಗರದ ಹೊರವಲಯದಲ್ಲಿರುವ ನೇಟಸ್ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಾಳೆ.</p>.<p>ಈಗಾಗಲೇ ದುಬೈ, ಉಜ್ಬೇಕಿಸ್ತಾನ ಹಾಗೂ ಮಲೇಷ್ಯಾದಲ್ಲಿ ನಡೆದಿದ್ದ ಟೇಕ್ವಾಂಡೊ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದಿದ್ದಾಳೆ. ಶಾನ್ವಿಗೆ ಭಾರತ ತಂಡದ ತರಬೇತುದಾರ ಪ್ರದೀಪ್ ಮತ್ತು ಬಾಲರಾಜನ್ ತರಬೇತಿ ನೀಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಗುಜರಾತ್ನ ಗಾಂಧಿನಗರದ ಧ್ಯಾನ್ ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಟೇಕ್ವಾಂಡೊ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ರಾಮನಗರದ ಟೇಕ್ವಾಂಡೊ ಕ್ರೀಡಾಪಟು ಶಾನ್ವಿ ಸತೀಶ್ ಸ್ಪಾರಿಂಗ್ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದಾಳೆ.</p>.<p>ಸ್ಪರ್ಧೆಯ 8–10 ವರ್ಷದೊಳಗಿನವರ 25 ಕೆ.ಜಿ.ಯಿಂದ 30 ಕೆ.ಜಿ ಒಳಗಿನ ತಂಡವನ್ನು ಶಾನ್ವಿ ಪ್ರತಿನಿಧಿಸಿದ್ದಳು. ಸ್ಪರ್ಧೆಯಲ್ಲಿ ಕರ್ನಾಟಕ ಸೇರಿದಂತೆ ತಮಿಳುನಾಡು, ತೆಲಂಗಾಣ, ದೆಹಲಿ, ಗುಜರಾತ್, ಒಡಿಶಾ ಹಾಗೂ ಕೇರಳ ರಾಜ್ಯದ 450ಕ್ಕೂ ಹೆಚ್ಚು ಕ್ರಿಡಾಪಟುಗಳು ಭಾಗವಹಿಸಿದ್ದರು.</p>.<p>ಬೆಂಗಳೂರು ದಕ್ಷಿಣ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಹಾಗೂ ಚೈತ್ರಾ ದಂಪತಿ ಪುತ್ರಿಯಾದ 8 ವರ್ಷದ ಶಾನ್ವಿ, ನಗರದ ಹೊರವಲಯದಲ್ಲಿರುವ ನೇಟಸ್ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಾಳೆ.</p>.<p>ಈಗಾಗಲೇ ದುಬೈ, ಉಜ್ಬೇಕಿಸ್ತಾನ ಹಾಗೂ ಮಲೇಷ್ಯಾದಲ್ಲಿ ನಡೆದಿದ್ದ ಟೇಕ್ವಾಂಡೊ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದಿದ್ದಾಳೆ. ಶಾನ್ವಿಗೆ ಭಾರತ ತಂಡದ ತರಬೇತುದಾರ ಪ್ರದೀಪ್ ಮತ್ತು ಬಾಲರಾಜನ್ ತರಬೇತಿ ನೀಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>