ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುಕಟ್ಟೆಗೆ ತಹಶೀಲ್ದಾರ್‌ ಭೇಟಿ: ವ್ಯಾಪಾರಿಗಳಿಗೆ ಎಚ್ಚರಿಕೆ

ಗುಂಪುಗೂಡಿದರೆ ಕ್ರಮ
Last Updated 2 ಮೇ 2021, 5:05 IST
ಅಕ್ಷರ ಗಾತ್ರ

ಕನಕಪುರ: ತಹಶೀಲ್ದಾರ್‌ ವಿ.ಆರ್‌. ವಿಶ್ವನಾಥ್‌ ನೇತೃತ್ವದ ತಂಡ ಶನಿವಾರ ಬೆಳಿಗ್ಗೆಯೇ ರಸ್ತೆಗೆ ಇಳಿದು ಪರಿಶೀಲನೆ ನಡೆಸಿತು.

ಅಧಿಕಾರಿಗಳ ತಂಡ ಎಪಿಎಂಸಿ ಮಾರುಕಟ್ಟೆ, ರಿಲಯನ್ಸ್‌ ಮಾಲ್‌ಗೆ ಭೇಟಿ ನೀಡಿ ಜನರು ಗುಂಪು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಲ್ಲಿನ ಮಾರುಕಟ್ಟೆ ಅಧಿಕಾರಿಗಳಿಗೆ ಸೂಚಿಸಿತು.

ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿ ಮಾಡುವ ಸಂದರ್ಭದಲ್ಲಿ ನಡುವೆ ಅಂತರ ಕಾಯ್ದುಗೊಳ್ಳಬೇಕೆಂದು ನಾಗರಿಕರಿಗೆ ತಿಳಿವಳಿಕೆ
ಮೂಡಿಸಿತು. ಸೋಂಕು ತಡೆಗೆ ಎಲ್ಲರೂ ಅಧಿಕಾರಿಗಳೊಂದಿಗೆ ಸಹಕಾರ ನೀಡಬೇಕು. ಇಷ್ಟವಾದರೆ ಸಂಕಷ್ಟ ಕಟ್ಟಿಟ್ಟಬುತ್ತಿ ಎಂದು ಅರಿವು ಮೂಡಿಸಿತು.

ನಗರಸಭೆ ಅಧ್ಯಕ್ಷ ಮುಕ್ಬುಲ್‌ಪಾಷ, ಸರ್ಕಲ್‌ ಇನ್‌ಸ್ಪೆಕ್ಟರ್‌ ಟಿ.ಟಿ. ಕೃಷ್ಣ, ಸಬ್‌ ಇನ್‌ಸ್ಪೆಕ್ಟರ್‌ ಲಕ್ಷ್ಮಣ್‌ಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT