<p><strong>ಕನಕಪುರ</strong>: ಇಲ್ಲಿನ ರೈಸ್ ಮಿಲ್ ಬಳಿ ಇರುವ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಯು ಮಂಗಳವಾರ ಅತ್ಯಂತ ಬಿರುಸಿನಿಂದ ನಡೆಯಿತು. ಆಡಳಿತ ಮಂಡಳಿಗೆ 12 ನಿರ್ದೇಶಕರ ಆಯ್ಕೆ ಮಾಡಬೇಕಿದ್ದು ಅದರಲ್ಲಿ 9 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಿತು.</p>.<p>ಚುನಾವಣೆಯಲ್ಲಿ ಸಾಮಾನ್ಯ ಎರಡು ಸ್ಥಾನ, ಹಿಂದುಳಿದ ‘ಬಿ’ ವರ್ಗದ ಒಂದು ಸ್ಥಾನಕ್ಕೆ ಚುನಾವಣೆ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ ಬಿಜೆಪಿ–ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.</p>.<p>ಸಾಮಾನ್ಯ ವರ್ಗದ ಎರಡು ಸ್ಥಾನಕ್ಕೆ ಐವರು, ಹಿಂದುಳಿದ ‘ಎ’ ವರ್ಗದ ಒಂದು ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. 311 ಮತದಾರರಿದ್ದು 304 ಮತಗಳು ಚಲಾವಣೆಯಾಗಿ ಶೇಕಡ 99ರಷ್ಟು ಮತದಾನವಾಯಿತು.</p>.<p>ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಜಿ.ಎ ದೇವರಾಜು, ಚಿಕ್ಕೋನು, ಎಸ್.ಮಹೇಶ್ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚಿನ ಮತಗಳನ್ನು ಪಡೆದು ಗೆಲುವು ಸಾಧಿಸಿದರು.</p>.<p>ಸಹಕಾರ ಇಲಾಖೆ ಮಂಜುನಾಥ್ ಚುನಾವಣಾ ಅಧಿಕಾರಿಯಾಗಿ, ಟಿಎಪಿಸಿಎಂಎಸ್ ಕಾರ್ಯದರ್ಶಿ ಸಿ.ಆಶಾ ಸಹಾಯಕ ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.</p>.<p><strong>ಮತದಾನ ಮಾಡಿದ ಡಿಕೆಶಿ:</strong> </p><p>ಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದರು.</p>.<p>ನಂತರ ಮಾತನಾಡಿ, ‘ಕಾರ್ಯಕರ್ತರು ನಮ್ಮ ಶಕ್ತಿಯಾಗಿ ಚುನಾವಣೆಗಳಲ್ಲಿ ಕೆಲಸ ಮಾಡುತ್ತಾರೆ. ಅವರ ಚುನಾವಣೆಗೆ ನಾವು ಬಂದು ಮತದಾನ ಮಾಡುವ ಮೂಲಕ ಅವರಿಗೆ ಶಕ್ತಿ ನೀಡಬೇಕಿದೆ. ಇದಕ್ಕಾಗಿ ಬಂದು ಮತದಾನ ಮಾಡಿದ್ದೇವೆ’ ಎಂದರು.</p>.<p>ಸ್ಥಳೀಯ ಚುನಾವಣೆ ಪಕ್ಷದ ಆಧಾರ. ಯಾವ ಚುನಾವಣೆಯೂ ನಿರ್ಲಕ್ಷ್ಯ ಮಾಡುವಂತಿಲ್ಲ. ಪ್ರತಿಯೊಂದು ಚುನಾವಣೆಯನ್ನು ಚುನಾವಣೆಯಾಗಿ ಎದುರಿಸಬೇಕಿದೆ ಎಂದು ತಿಳಿಸಿದರು.</p>.<p>‘ಈ ಚುನಾವಣೆಯಲ್ಲಿ ರಾಜಿ ಮಾಡಿಕೊಳ್ಳಬಹುದಿತ್ತು. ಆದರೆ, ಚುನಾವಣೆಯಲ್ಲಿ ನಮ್ಮ ಪರವಾಗಿ ಅಥವಾ ವಿರುದ್ಧವಾಗಿ ಯಾರಿದ್ದಾರೆ ಎಂದು ತಿಳಿಯುತ್ತದೆ. ಡಿ.ಕೆ.ಸುರೇಶ್ ಅವರ ಚುನಾವಣೆಯಿಂದ ನಾವು ಎಚ್ಚೆತ್ತುಕೊಂಡಿದ್ದೇವೆ. ಕಾರ್ಯಕರ್ತರ ಚುನಾವಣೆಯಾಗಲಿ, ನಮ್ಮ ಚುನಾವಣೆಯಾಗಲಿ ನಿರ್ಲಕ್ಷ್ಯ ಮಾಡುವುದಿಲ್ಲ’ಎಂದು ಹೇಳಿದರು.<br><br> ಮಾಜಿ ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್ ರವಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>12ಕ್ಕೆ 12 ಸ್ಥಾನ ಗೆಲುವು </strong></p><p>ಟಿಎಪಿಸಿಎಂಎಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು. ಉಳಿದ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯಗಳಿಸುವ ಮೂಲಕ ಟಿಎಪಿಸಿಎಂಎಸ್ 12ಕ್ಕೆ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಇಲ್ಲಿನ ರೈಸ್ ಮಿಲ್ ಬಳಿ ಇರುವ ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆಯು ಮಂಗಳವಾರ ಅತ್ಯಂತ ಬಿರುಸಿನಿಂದ ನಡೆಯಿತು. ಆಡಳಿತ ಮಂಡಳಿಗೆ 12 ನಿರ್ದೇಶಕರ ಆಯ್ಕೆ ಮಾಡಬೇಕಿದ್ದು ಅದರಲ್ಲಿ 9 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಿತು.</p>.<p>ಚುನಾವಣೆಯಲ್ಲಿ ಸಾಮಾನ್ಯ ಎರಡು ಸ್ಥಾನ, ಹಿಂದುಳಿದ ‘ಬಿ’ ವರ್ಗದ ಒಂದು ಸ್ಥಾನಕ್ಕೆ ಚುನಾವಣೆ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ ಬಿಜೆಪಿ–ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.</p>.<p>ಸಾಮಾನ್ಯ ವರ್ಗದ ಎರಡು ಸ್ಥಾನಕ್ಕೆ ಐವರು, ಹಿಂದುಳಿದ ‘ಎ’ ವರ್ಗದ ಒಂದು ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. 311 ಮತದಾರರಿದ್ದು 304 ಮತಗಳು ಚಲಾವಣೆಯಾಗಿ ಶೇಕಡ 99ರಷ್ಟು ಮತದಾನವಾಯಿತು.</p>.<p>ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಜಿ.ಎ ದೇವರಾಜು, ಚಿಕ್ಕೋನು, ಎಸ್.ಮಹೇಶ್ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚಿನ ಮತಗಳನ್ನು ಪಡೆದು ಗೆಲುವು ಸಾಧಿಸಿದರು.</p>.<p>ಸಹಕಾರ ಇಲಾಖೆ ಮಂಜುನಾಥ್ ಚುನಾವಣಾ ಅಧಿಕಾರಿಯಾಗಿ, ಟಿಎಪಿಸಿಎಂಎಸ್ ಕಾರ್ಯದರ್ಶಿ ಸಿ.ಆಶಾ ಸಹಾಯಕ ಚುನಾವಣೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.</p>.<p><strong>ಮತದಾನ ಮಾಡಿದ ಡಿಕೆಶಿ:</strong> </p><p>ಚುನಾವಣೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದರು.</p>.<p>ನಂತರ ಮಾತನಾಡಿ, ‘ಕಾರ್ಯಕರ್ತರು ನಮ್ಮ ಶಕ್ತಿಯಾಗಿ ಚುನಾವಣೆಗಳಲ್ಲಿ ಕೆಲಸ ಮಾಡುತ್ತಾರೆ. ಅವರ ಚುನಾವಣೆಗೆ ನಾವು ಬಂದು ಮತದಾನ ಮಾಡುವ ಮೂಲಕ ಅವರಿಗೆ ಶಕ್ತಿ ನೀಡಬೇಕಿದೆ. ಇದಕ್ಕಾಗಿ ಬಂದು ಮತದಾನ ಮಾಡಿದ್ದೇವೆ’ ಎಂದರು.</p>.<p>ಸ್ಥಳೀಯ ಚುನಾವಣೆ ಪಕ್ಷದ ಆಧಾರ. ಯಾವ ಚುನಾವಣೆಯೂ ನಿರ್ಲಕ್ಷ್ಯ ಮಾಡುವಂತಿಲ್ಲ. ಪ್ರತಿಯೊಂದು ಚುನಾವಣೆಯನ್ನು ಚುನಾವಣೆಯಾಗಿ ಎದುರಿಸಬೇಕಿದೆ ಎಂದು ತಿಳಿಸಿದರು.</p>.<p>‘ಈ ಚುನಾವಣೆಯಲ್ಲಿ ರಾಜಿ ಮಾಡಿಕೊಳ್ಳಬಹುದಿತ್ತು. ಆದರೆ, ಚುನಾವಣೆಯಲ್ಲಿ ನಮ್ಮ ಪರವಾಗಿ ಅಥವಾ ವಿರುದ್ಧವಾಗಿ ಯಾರಿದ್ದಾರೆ ಎಂದು ತಿಳಿಯುತ್ತದೆ. ಡಿ.ಕೆ.ಸುರೇಶ್ ಅವರ ಚುನಾವಣೆಯಿಂದ ನಾವು ಎಚ್ಚೆತ್ತುಕೊಂಡಿದ್ದೇವೆ. ಕಾರ್ಯಕರ್ತರ ಚುನಾವಣೆಯಾಗಲಿ, ನಮ್ಮ ಚುನಾವಣೆಯಾಗಲಿ ನಿರ್ಲಕ್ಷ್ಯ ಮಾಡುವುದಿಲ್ಲ’ಎಂದು ಹೇಳಿದರು.<br><br> ಮಾಜಿ ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್ ರವಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>12ಕ್ಕೆ 12 ಸ್ಥಾನ ಗೆಲುವು </strong></p><p>ಟಿಎಪಿಸಿಎಂಎಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು. ಉಳಿದ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯಗಳಿಸುವ ಮೂಲಕ ಟಿಎಪಿಸಿಎಂಎಸ್ 12ಕ್ಕೆ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>