ತಹಶೀಲ್ದಾರ್ ನಾಗೇಶ್ ಅವರನ್ನು ಈ ಬಗ್ಗೆ ಭೇಟಿ ಮಾಡಿ ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಮುಜರಾಯಿ ಸಿ ದರ್ಜೆ ದೇವಾಲಯಗಳ ಅರ್ಚಕರಿಗೆ ತಸ್ತಿಕ್ ಹಣ ಬಿಡುಗಡೆ ಮಾಡಿ ನೆರವು ನೀಡಬೇಕು ಎಂದು ಮನವಿ ಮಾಡಲಾಗಿದೆ. ತಹಶೀಲ್ದಾರ್ ತಕ್ಷಣ ಬಿಡುಗಡೆ ಮಾಡುವುದಾಗಿ ತಿಳಿಸಿ, ಈ ಬಗ್ಗೆ ತಮ್ಮ ಇಲಾಖಾ ಸಿಬ್ಬಂದಿಗೆ ಆದೇಶ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.