ಇಲ್ಲಿನ ಹೊಂಬೇಗೌಡನದೊಡ್ಡಿ ಗ್ರಾಮದ ಯುವಕ ಚನ್ನೇಗೌಡ ಬೆನ್ನ ಮೇಲೆ ನಟ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಟ್ಯಾಟು ಹಾಕಿಸಿಕೊಂಡಿದ್ದಾರೆ. ಇತ್ತೀಚೆಗೆ ಅಭಿಮಾನಿಯೊಬ್ಬ ತನ್ನ ಬೆನ್ನ ಮೇಲೆ ನಟ ದರ್ಶನ್ ಅವರ ಟ್ಯಾಟು ಹಾಕಿಸಿಕೊಂಡಿದ್ದರು. ಮಂಡ್ಯದಲ್ಲಿ ಸುಮಲತಾ ಅವರ ಬೆಂಬಲಕ್ಕೆ ನಿಂತು ಅವರನ್ನು ಗೆಲ್ಲಿಸಿದ್ದು ಸೇರಿದಂತೆ, ದರ್ಶನ್ ಮೇಲಿನ ಅಭಿಮಾನಕ್ಕೆ ಟ್ಯಾಟು ಹಾಕಿಸಿಕೊಂಡಿದ್ದಾಗಿ ತಿಳಿಸಿದ್ದರು.