ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಶಿಕ್ಷಕರಿಗೆ ತಪ್ಪದ ಶೈಕ್ಷಣಿಕೇತರ ಕರ್ತವ್ಯದ ಹೊರೆ: ಭಾರವಾದ ಬಿಎಲ್‌ಒ ಹುದ್ದೆ

Published : 18 ಸೆಪ್ಟೆಂಬರ್ 2025, 2:18 IST
Last Updated : 18 ಸೆಪ್ಟೆಂಬರ್ 2025, 2:18 IST
ಫಾಲೋ ಮಾಡಿ
Comments
ಚುನಾವಣಾ ಆಯೋಗದ ಸೂಚನೆ ಮೇರೆಗೆ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹುದ್ದೆಗೆ ನಿಯೋಜನೆ ಮಾಡಲಾಗಿದೆ. ಆಯೋಗದ ಆದೇಶವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲೇಬೇಕು
– ಯಶವಂತ್ ವಿ. ಗುರುಕರ್ ಜಿಲ್ಲಾಧಿಕಾರಿ ಬೆಂಗಳೂರು ದಕ್ಷಿಣ
ಯಶವಂತ್ ವಿ. ಗುರುಕರ್, ಜಿಲ್ಲಾಧಿಕಾರಿ

ಯಶವಂತ್ ವಿ. ಗುರುಕರ್, ಜಿಲ್ಲಾಧಿಕಾರಿ

‘ಅನ್ಯ ಕೆಲಸಗಳ ಭಾರಕ್ಕೆ ನಲುಗಿದ್ದೇವೆ’
‘ಅನ್ಯ ಕೆಲಸಗಳ ಭಾರಕ್ಕೆ ಶಿಕ್ಷಕರು ಈಗಾಗಲೇ ನಲುಗಿದ್ದಾರೆ. ಇದನ್ನು ಮನಗಂಡ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಅನ್ಯ ಕಾರ್ಯಗಳಿಗೆ ಹಾಗೂ ತರಬೇತಿಗಳಿಗೆ ಬಳಸಬಾರದು ಎಂದು ಆದೇಶ ಹೊರಡಿಸಿದ್ದಾರೆ. ಇದರ ನಡುವೆಯೇ ಬಿಎಲ್‌ಒ ಹುದ್ದೆಗೆ ಶಿಕ್ಷಕರನ್ನು ನೇಮಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಶಿಕ್ಷಕರು ಶೈಕ್ಷಣಿಕ ಚಟುವಟಿಕೆ ಬದಲು ಬೇರೆ ಕೆಲಸಗಳಿಗೆ ಹೆಚ್ಚು ಸಮಯ ಕೊಡಬೇಕಾಗುತ್ತದೆ. ಇದರಿಂದ ಮಕ್ಕಳ ಕಲಿಕೆ ಕುಂಠಿತವಾಗಿ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಬಿಎಲ್‌ಒ ಹುದ್ದೆಗಳಿಂದ ಶಿಕ್ಷಕರಿಗೆ ಮುಕ್ತಿ ನೀಡಬೇಕು’ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಆಗ್ರಹಿಸಿದರು.
‘ಶಿಕ್ಷಣ ವ್ಯವಸ್ಥೆ ಮೇಲೆ ಪರಿಣಾಮ’
‘ಜಿಲ್ಲೆಯಲ್ಲಿ ಈಗಾಗಲೇ ಹಲವು ಶಾಲೆಗಳು ಶಿಕ್ಷಕರ ಕೊರತೆಯಿಂದ ನಲುಗುತ್ತಿವೆ. ಶೂನ್ಯ ದಾಖಲಾತಿ ಕಾರಣಕ್ಕೆ ವರ್ಷದಿಂದ ವರ್ಷಕ್ಕೆ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಶಾಲೆಯಲ್ಲಿ ಶಿಕ್ಷಕರೇ ಇರುವುದಿಲ್ಲ ಸರಿಯಾಗಿ ಪಾಠ ಮಾಡುವುದಿಲ್ಲ ಎಂಬ ಆರೋಪ ಪೋಷಕರಿಂದ ಸಾಮಾನ್ಯವಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಶಾಲೆಗಳ ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಇದನ್ನು ತಡೆದು ಸರ್ಕಾರಿ ಶಾಲೆಗಳನ್ನು ಉಳಿಸಿ ಗುಣಮಟ್ಟದ ಶಿಕ್ಷಣ ನೀಡಬೇಕಾದರೆ ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ಬಳಸಬಾರದು. ಹೀಗೆ ಮಾಡುವುದರಿಂದ ಶಿಕ್ಷಣ ವ್ಯವಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ’ ಎಂದು ನಿವೃತ್ತ ಮುಖ್ಯ ಶಿಕ್ಷಕ ಸಿದ್ದರಾಜು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT