’ವಕೀಲನಾದರೂ ಶಿಕ್ಷಕರ ಬಗ್ಗೆ ಮೊದಲಿನಿಂದಲೂ ವಿಶೇಷವಾದ ಕಾಳಜಿ ಹೊಂದಿ ಶಿಕ್ಷಕರ ಸೌಲಭ್ಯಗಳಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇನೆ. ಕ್ಷೇತ್ರಕ್ಕೆ ಒಳಪಡುವ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಶಿಕ್ಷಕರು, ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬಾರಿ ಶಿಕ್ಷಕರು ನನಗೆ ಗೆಲುವು ತಂದು ಕೊಡುವ ವಿಶ್ವಾಸವಿದೆ’ ಎಂದರು.