ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ ಹನುಮಂತಪುರದಲ್ಲಿ ಇಂದಿನಿಂದ ಪ್ರತಿಷ್ಠಾಪನಾ ಮಹೋತ್ಸವ

Last Updated 5 ಫೆಬ್ರುವರಿ 2020, 13:11 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಹನುಮಂತಪುರದಲ್ಲಿ ಫೆ.6 ರಿಂದ 7 ರವರೆಗೆ ಆದಿಶಕ್ತಿ ಮಾರಮ್ಮ ದೇವಿ ನೂತನ ಸ್ಥಿರಬಿಂಬ ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ ಎಂದು ವ್ಯವಸ್ಥಾಪಕ ಎಚ್‌.ಕೆ.ಶಿವರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 6 ರಂದು ಸಂಜೆ ಗಂಗಾಪೂಜೆ ಪೀಠಾ ಪೂಜೆ ನಡೆಯಲಿದೆ.

7ರಂದು ಬ್ರಾಹ್ಮೀ ಮಹೂರ್ತದಲ್ಲಿ ಪ್ರಾಣಪ್ರತಿಷ್ಠೆ ಹೋಮಾದಿಗಳು ನಡೆಯಲಿವೆ. ಬೆಳಿಗ್ಗೆ 11 ಗಂಟೆಗೆ ಸಂಸದ ಡಿ.ಕೆ.ಸುರೇಶ್‌ ಧಾರ್ಮಿಕ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ಎ.ಮಂಜುನಾಥ ಅಧ್ಯಕ್ಷತೆ ವಹಿಸುವರು.

ವಿಧಾನ ಪರಿಷತ್‌ ಸದಸ್ಯ ಎಚ್‌.ಎಂ.ರೇವಣ್ಣ, ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಬಾಲಕೃಷ್ಣ, ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ, ಪಾಲನಹಳ್ಳಿ ಶನೇಶ್ವರ ಕ್ಷೇತ್ರದ ಡಾ.ಸಿದ್ದರಾಜ ಸ್ವಾಮಿ, ಬಿದನಗೆರೆ ಶನೇಶ್ವರ ಕ್ಷೇತ್ರದ ಧನಂಜಯ ಸ್ವಾಮಿ, ತಹಶೀಲ್ದಾರ್‌ ಎನ್‌.ರಮೇಶ್‌ ಭಾಗವಹಿಸುವರು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT