ಚನ್ನಪಟ್ಟಣ: ತಾಲ್ಲೂಕಿನ ಹುಣಸನಹಳ್ಳಿ ಗ್ರಾಮದ ಬಿಸಿಲೇಶ್ವರಿ ದೇವಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಮಂಗಳವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಯುಗಾದಿಯಂದು ಪೂಜೆ ಸಲ್ಲಿಸಲು ಬಂದಿದ್ದೇನೆ. ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ, ನಾಡಿನ ಜನತೆಗೆ ಸುಖ ಶಾಂತಿ ದೊರೆಯಲಿ ಎಂಬ ಆಶಯದಿಂದ ಪೂಜೆ ಸಲ್ಲಿಸಿದ್ದೇನೆ ಎಂದರು.
ಆದರೆ ನಿಶಾ ಯೋಗೇಶ್ವರ್ ಬೇಟಿ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಜರಿದ್ದುದ್ದು ಗಮನ ಸೆಳೆಯಿತು.