<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಹನುಮಾಪುರದದೊಡ್ಡಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲು ಒಡೆದು ಹುಂಡಿಯಲ್ಲಿದ್ದ ಹಣ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಚಿನ್ನದ ತಾಳಿಗಳನ್ನು ಕಳವು ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ದೇವಾಸ್ಥಾನದ ಬಾಗಿಲನ್ನು ಕಬ್ಬಿಣದ ಸಲಾಕೆಗಳಿಂದ ಒಡೆದು ಒಳನುಗ್ಗಿರುವ ಕಳ್ಳರು, ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣ ಹಾಗೂ ದೇವಿಯ ಮೈಮೆಲಿದ್ದ 5ಕ್ಕೂ ಹೆಚ್ಚು ಚಿನ್ನದ ತಾಳಿಗಳನ್ನು ಕಳವು ಮಾಡಿದ್ದಾರೆ.</p>.<p>ಹಾಗೆಯೇ ಗ್ರಾಮ ಹೊರವಲಯದ ತೋಟದಲ್ಲಿರುವ ಸಣ್ಣಪುಟ್ಟ ದೇವಾಲಯಗಳಾದ ಹನುಮಂತ ದೇವಾಲಯ, ಕ್ಯಾತಮ್ಮ ಕೆಂಪಮ್ಮ ದೇವಾಲಯ ಹಾಗೂ ದಂಡಮ್ಮ ದೇವಾಲಯ ಸೇರಿದಂತೆ ಕೆಲವು ದೇವಾಲಯಗಳಿಗೂ ಕನ್ನ ಹಾಕಿರುವ ಕಳ್ಳರು, ಅಲ್ಲಿದ್ದ ಬೆಲೆಬಾಳುವ ವಸ್ತುಗಳು, ಹುಂಡಿಗಳನ್ನು ದೋಚಿದ್ದಾರೆ.</p>.<p>ಎಂ.ಕೆ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್, ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಬಿ. ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ತಾಲ್ಲೂಕಿನ ಹನುಮಾಪುರದದೊಡ್ಡಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲು ಒಡೆದು ಹುಂಡಿಯಲ್ಲಿದ್ದ ಹಣ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಚಿನ್ನದ ತಾಳಿಗಳನ್ನು ಕಳವು ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ದೇವಾಸ್ಥಾನದ ಬಾಗಿಲನ್ನು ಕಬ್ಬಿಣದ ಸಲಾಕೆಗಳಿಂದ ಒಡೆದು ಒಳನುಗ್ಗಿರುವ ಕಳ್ಳರು, ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣ ಹಾಗೂ ದೇವಿಯ ಮೈಮೆಲಿದ್ದ 5ಕ್ಕೂ ಹೆಚ್ಚು ಚಿನ್ನದ ತಾಳಿಗಳನ್ನು ಕಳವು ಮಾಡಿದ್ದಾರೆ.</p>.<p>ಹಾಗೆಯೇ ಗ್ರಾಮ ಹೊರವಲಯದ ತೋಟದಲ್ಲಿರುವ ಸಣ್ಣಪುಟ್ಟ ದೇವಾಲಯಗಳಾದ ಹನುಮಂತ ದೇವಾಲಯ, ಕ್ಯಾತಮ್ಮ ಕೆಂಪಮ್ಮ ದೇವಾಲಯ ಹಾಗೂ ದಂಡಮ್ಮ ದೇವಾಲಯ ಸೇರಿದಂತೆ ಕೆಲವು ದೇವಾಲಯಗಳಿಗೂ ಕನ್ನ ಹಾಕಿರುವ ಕಳ್ಳರು, ಅಲ್ಲಿದ್ದ ಬೆಲೆಬಾಳುವ ವಸ್ತುಗಳು, ಹುಂಡಿಗಳನ್ನು ದೋಚಿದ್ದಾರೆ.</p>.<p>ಎಂ.ಕೆ. ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್, ಗ್ರಾಮಾಂತರ ಸರ್ಕಲ್ ಇನ್ಸ್ಪೆಕ್ಟರ್ ಬಿ. ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>