<p><strong>ಕನಕಪುರ: </strong>‘ಸರ್ಕಾರದ ನಿಯಮಾವಳಿಯಂತೆ ಸಾರ್ವಜನಿಕರ ಸಂದರ್ಶನಕ್ಕೆ ಮಧ್ಯಾನ್ಹದ 3 ಗಂಟೆ ನಂತರ ಅವಕಾಶ ಮಾಡಿಕೊಡಲಾಗಿದೆ. ಇದರಲ್ಲಿ ತಪ್ಪೇನಿದೆ. ಈ ಸಮಯ ಬೇಡವೆಂದು ತಿಳಿಸಿದರೆ ಹೇಳಿದ ಸಮಯವನ್ನೇ ನಿಗಧಿ ಮಾಡುತ್ತೇನೆ’ ಎಂದು ತಹಶೀಲ್ದಾರ್ ವರ್ಷ ಒಡೆಯರ್ ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಹೇಳಿದರು.</p>.<p>ಇಲ್ಲಿನ ಮಿನಿ ವಿಧಾನಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ, ಸದಸ್ಯರು ‘ತಹಶೀಲ್ದಾರ್ ಕಚೇರಿ ಮುಂಭಾಗದ ಗೇಟ್ನಲ್ಲಿ ಇಬ್ಬರು ಲೇಡಿ ಬೌನ್ಸರ್ ಇದ್ದಾರೆ. ಅವರು ಒಳಗಡೆ ಬಿಡುವುದಿಲ್ಲ. ಕೇಳಿದರೆ 3 ಗಂಟೆಯ ನಂತರ ಬನ್ನಿ ಎಂದು ಹೇಳುತ್ತಾರೆ’ ಎಂದು ಮಾಡಿದ ಆರೋಪಕ್ಕೆ ಅವರು ಉತ್ತರಿಸಿ ಮಾತನಾಡಿದರು.</p>.<p>‘ಸರ್ಕಾರದ ನಿಯಮದಂತೆ ನಾನು ಕೆಲಸ ಮಾಡುತ್ತಿದ್ದೇನೆ. ಕಚೇರಿ ಮುಂಭಾಗದಲ್ಲಿ ಕೆಲಸ ನಿರ್ವಹಿಸುವ ಮಹಿಳಾ ನೌಕರರನ್ನು ಬೌನ್ಸರ್ ಎಂದು ಹೀಯಾಳಿಸುವುದು ಸರಿಯಲ್ಲ. ಕಚೇರಿ ಕೆಲಸ ಮಾಡಲು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸಾರ್ವಜನಿಕರಿಗೆ 3 ಗಂಟೆಯ ನಂತರ ಅವಕಾಶ ಮಾಡಿಕೊಡಲಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ನಾನು ಹೊಸದಾಗಿ ಈ ತಾಲ್ಲೂಕಿಗೆ ಬಂದಿದ್ದು, ನಿಮ್ಮಗಳ ಪರಿಚಯವಿಲ್ಲದ ಕಾರಣ ಈ ರೀತಿ ಗೊಂದಲವಾಗಿದೆ. ಜನಪ್ರತಿನಿಧಿಗಳಾದ ನೀವು ಕಚೇರಿಗೆ ಯಾವ ಸಮಯದಲ್ಲಾದರೂ ಬಂದು ಭೇಟಿ ಮಾಡಬಹುದು. ಸಾರ್ವಜನಿಕರಿಗೆ ಎಂದು ಸಮಯ ನಿಗಧಿ ಮಾಡಿದ್ದೇವೆ ಅಷ್ಟೇ’ ಎಂದು ಉತ್ತರಿಸಿದರು.</p>.<p>ಅಧ್ಯಕ್ಷರು ಮಾತನಾಡಿ, ‘ನೀವು ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಗೌರವ ಕೊಡುತ್ತಿಲ್ಲ. 4 ವರ್ಷಗಳಲ್ಲಿ ಎಂದೂ ಮಾತನಾಡದ ಸದಸ್ಯರು ಇಂದು ಮಾತನಾಡುತ್ತಿದ್ದಾರೆ ಎಂದರೆ ನೀವೇ ಅರ್ಥ ಮಾಡಿಕೊಳ್ಳಿ. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ’ ಎಂದರು.</p>.<p>‘ಕಂದಾಯ ಇಲಾಖೆಗಳಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ. ಇತರ ಇಲಾಖೆಗಳು ಸರ್ಕಾರದ ಸವಲತ್ತನ್ನು ನೇರವಾಗಿ ರೈತರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ನಿಮ್ಮಿಂದ ಏಕೆ ಆಗುತ್ತಿಲ್ಲ. ಸಂಜೆ ಸಮಯ ರೈತರಿಗೆ ಹಾಲು ಕರೆಯವುದು ಮತ್ತಿತರ ಕೆಲಸಗಳಿರುತ್ತವೆ. ಆ ಕಾರಣದಿಂದ 3 ಗಂಟೆ ನಂತರದ ಬದಲು ಬೆಳಿಗ್ಗೆ ಸಮಯದಲ್ಲಿ ಸಾರ್ವಜನಿಕರ ಸಂದರ್ಶನಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.</p>.<p>‘ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಜನಸೇವಕರೇ. ಇಬ್ಬರೂ ಸೇರಿ ಸಾರ್ವಜನಿಕರ ಕೆಲಸ ಮಾಡಬೇಕು. ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಬೇಕು. ತಾಲ್ಲೂಕು ಆಡಳಿತವನ್ನು ಚುರುಕುಗೊಳಿಸುವ ಕೆಲಸವನ್ನು ಮಾಡುತ್ತೇನೆ. ಹೋಬಳಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಆಧಾರ್ ತಿದ್ದುಪಡಿ ಸಮಸ್ಯೆಗೆ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ತಿಳಿಸಿದರು.</p>.<p>ಕೃಷಿ, ರೇಷ್ಮೆ, ತೋಟಗಾರಿಕೆ, ಸಾರಿಗೆ ಮತ್ತಿತರರ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಇಲಾಖೆಗಳಲ್ಲಿನ ಕೆಲವು ನ್ಯೂನತೆ ಮತ್ತು ಸಮಸ್ಯೆಗಳ ಬಗ್ಗೆ ಸದಸ್ಯರು ಸಭೆಗೆ ತಿಳಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.</p>.<p>ಉಪಾಧ್ಯಕ್ಷೆ ಅನ್ನಪೂರ್ಣ ಸೋಮಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಎಸ್.ಶಿವರಾಮ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>‘ಸರ್ಕಾರದ ನಿಯಮಾವಳಿಯಂತೆ ಸಾರ್ವಜನಿಕರ ಸಂದರ್ಶನಕ್ಕೆ ಮಧ್ಯಾನ್ಹದ 3 ಗಂಟೆ ನಂತರ ಅವಕಾಶ ಮಾಡಿಕೊಡಲಾಗಿದೆ. ಇದರಲ್ಲಿ ತಪ್ಪೇನಿದೆ. ಈ ಸಮಯ ಬೇಡವೆಂದು ತಿಳಿಸಿದರೆ ಹೇಳಿದ ಸಮಯವನ್ನೇ ನಿಗಧಿ ಮಾಡುತ್ತೇನೆ’ ಎಂದು ತಹಶೀಲ್ದಾರ್ ವರ್ಷ ಒಡೆಯರ್ ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಹೇಳಿದರು.</p>.<p>ಇಲ್ಲಿನ ಮಿನಿ ವಿಧಾನಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ, ಸದಸ್ಯರು ‘ತಹಶೀಲ್ದಾರ್ ಕಚೇರಿ ಮುಂಭಾಗದ ಗೇಟ್ನಲ್ಲಿ ಇಬ್ಬರು ಲೇಡಿ ಬೌನ್ಸರ್ ಇದ್ದಾರೆ. ಅವರು ಒಳಗಡೆ ಬಿಡುವುದಿಲ್ಲ. ಕೇಳಿದರೆ 3 ಗಂಟೆಯ ನಂತರ ಬನ್ನಿ ಎಂದು ಹೇಳುತ್ತಾರೆ’ ಎಂದು ಮಾಡಿದ ಆರೋಪಕ್ಕೆ ಅವರು ಉತ್ತರಿಸಿ ಮಾತನಾಡಿದರು.</p>.<p>‘ಸರ್ಕಾರದ ನಿಯಮದಂತೆ ನಾನು ಕೆಲಸ ಮಾಡುತ್ತಿದ್ದೇನೆ. ಕಚೇರಿ ಮುಂಭಾಗದಲ್ಲಿ ಕೆಲಸ ನಿರ್ವಹಿಸುವ ಮಹಿಳಾ ನೌಕರರನ್ನು ಬೌನ್ಸರ್ ಎಂದು ಹೀಯಾಳಿಸುವುದು ಸರಿಯಲ್ಲ. ಕಚೇರಿ ಕೆಲಸ ಮಾಡಲು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸಾರ್ವಜನಿಕರಿಗೆ 3 ಗಂಟೆಯ ನಂತರ ಅವಕಾಶ ಮಾಡಿಕೊಡಲಾಗಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ನಾನು ಹೊಸದಾಗಿ ಈ ತಾಲ್ಲೂಕಿಗೆ ಬಂದಿದ್ದು, ನಿಮ್ಮಗಳ ಪರಿಚಯವಿಲ್ಲದ ಕಾರಣ ಈ ರೀತಿ ಗೊಂದಲವಾಗಿದೆ. ಜನಪ್ರತಿನಿಧಿಗಳಾದ ನೀವು ಕಚೇರಿಗೆ ಯಾವ ಸಮಯದಲ್ಲಾದರೂ ಬಂದು ಭೇಟಿ ಮಾಡಬಹುದು. ಸಾರ್ವಜನಿಕರಿಗೆ ಎಂದು ಸಮಯ ನಿಗಧಿ ಮಾಡಿದ್ದೇವೆ ಅಷ್ಟೇ’ ಎಂದು ಉತ್ತರಿಸಿದರು.</p>.<p>ಅಧ್ಯಕ್ಷರು ಮಾತನಾಡಿ, ‘ನೀವು ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಗೌರವ ಕೊಡುತ್ತಿಲ್ಲ. 4 ವರ್ಷಗಳಲ್ಲಿ ಎಂದೂ ಮಾತನಾಡದ ಸದಸ್ಯರು ಇಂದು ಮಾತನಾಡುತ್ತಿದ್ದಾರೆ ಎಂದರೆ ನೀವೇ ಅರ್ಥ ಮಾಡಿಕೊಳ್ಳಿ. ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ’ ಎಂದರು.</p>.<p>‘ಕಂದಾಯ ಇಲಾಖೆಗಳಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ. ಇತರ ಇಲಾಖೆಗಳು ಸರ್ಕಾರದ ಸವಲತ್ತನ್ನು ನೇರವಾಗಿ ರೈತರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ. ನಿಮ್ಮಿಂದ ಏಕೆ ಆಗುತ್ತಿಲ್ಲ. ಸಂಜೆ ಸಮಯ ರೈತರಿಗೆ ಹಾಲು ಕರೆಯವುದು ಮತ್ತಿತರ ಕೆಲಸಗಳಿರುತ್ತವೆ. ಆ ಕಾರಣದಿಂದ 3 ಗಂಟೆ ನಂತರದ ಬದಲು ಬೆಳಿಗ್ಗೆ ಸಮಯದಲ್ಲಿ ಸಾರ್ವಜನಿಕರ ಸಂದರ್ಶನಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.</p>.<p>‘ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಜನಸೇವಕರೇ. ಇಬ್ಬರೂ ಸೇರಿ ಸಾರ್ವಜನಿಕರ ಕೆಲಸ ಮಾಡಬೇಕು. ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಬೇಕು. ತಾಲ್ಲೂಕು ಆಡಳಿತವನ್ನು ಚುರುಕುಗೊಳಿಸುವ ಕೆಲಸವನ್ನು ಮಾಡುತ್ತೇನೆ. ಹೋಬಳಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಆಧಾರ್ ತಿದ್ದುಪಡಿ ಸಮಸ್ಯೆಗೆ ಕಾರ್ಯಕ್ರಮ ರೂಪಿಸಲಾಗಿದೆ’ ಎಂದು ತಿಳಿಸಿದರು.</p>.<p>ಕೃಷಿ, ರೇಷ್ಮೆ, ತೋಟಗಾರಿಕೆ, ಸಾರಿಗೆ ಮತ್ತಿತರರ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಇಲಾಖೆಗಳಲ್ಲಿನ ಕೆಲವು ನ್ಯೂನತೆ ಮತ್ತು ಸಮಸ್ಯೆಗಳ ಬಗ್ಗೆ ಸದಸ್ಯರು ಸಭೆಗೆ ತಿಳಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.</p>.<p>ಉಪಾಧ್ಯಕ್ಷೆ ಅನ್ನಪೂರ್ಣ ಸೋಮಶೇಖರ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ಕಾರ್ಯ ನಿರ್ವಾಹಕ ಅಧಿಕಾರಿ ಟಿ.ಎಸ್.ಶಿವರಾಮ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>