ಭರತ್ ಕುಮಾರ್, ಪ್ರದೀಪ್, ಖುಷಿ, ಕುಮಾರ್ ಸೇರಿದಂತೆ ಸ್ನೇಹಿತರು ಪಾಂಡವಪುರ ಸಮೀಪ ಉಕ್ಕಡ ಮಾರಮ್ಮ ದೇವಸ್ಥಾನಕ್ಕೆ ಹೋಗಿದ್ದರು. ಅಲ್ಲಿಂದ ಬೆಂಗಳೂರಿಗೆ ವಾಪಸ್ ಬರುವಾಗ ಬಿಡದಿ ಸಮೀಪ ಕೆಂಚನಗುಪ್ಪೆ ಗೇಟ್ ಬಳಿ ಇರುವ ಎಸ್ಎಲ್ಎನ್ ಲಾಡ್ಜ್ನಲ್ಲಿ ಬೆಳಗಿನ ಜಾವ ಉಳಿದುಕೊಳ್ಳಲು ಹೋಗಿದ್ದಾರೆ. ಈ ವೇಳೆ ತಮ್ಮ ಜೊತೆಯಲ್ಲಿದ್ದ ಸ್ನೇಹಿತೆಯ ವಿಚಾರವಾಗಿ ಪ್ರದೀಪ್ ಕುಮಾರ್ ಮತ್ತು ಭರತ್ ಕುಮಾರ್ ನಡುವೆ ವಾಗ್ವಾದ ನಡೆದಿದೆ. ಆ ವೇಳೆ ಕುಮಾರ್ ಎಂಬಾತ ಭರತ್ಗೆ ಚಾಕುವಿನಿಂದ ಚುಚ್ಚಿದ್ದಾನೆ. ಸ್ನೇಹಿತರು ಭರತ್ನನ್ನು ರಾಮನಗರ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಭರತ್ನ ಶವವನ್ನು ಬೆಂಗಳೂರು–ಮೈಸೂರು ಹೆದ್ದಾರಿಯ ಮಾಯಗಾನಹಳ್ಳಿ ಸಮೀಪದ ರಸ್ತೆ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ವಿಚಾರಣೆ ವೇಳೆ ಕೊಲೆ ಮಾಡಿರುವುದು ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.