ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನೇಹಿತರ ಗಲಾಟೆ ಸಾವಿನಲ್ಲಿ ಅಂತ್ಯ

Last Updated 21 ಮಾರ್ಚ್ 2021, 20:48 IST
ಅಕ್ಷರ ಗಾತ್ರ

ಬಿಡದಿ: ಹುಡುಗಿ ವಿಚಾರವಾಗಿ ನಡೆದ ಜಗಳ ಸ್ನೇಹಿತನ ಕೊಲೆಯೊಂದಿಗೆ ಅಂತ್ಯಗೊಂಡ ಘಟನೆ ಪಟ್ಟಣದಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಶ್ರೀನಗರದ ಭರತ್‌ ಕುಮಾರ್(22) ಕೊಲೆಯಾದವರು. ಕೊಲೆ ಮಾಡಿದ ಆರೋಪಿ ಕುಮಾರ್‌(20)ನನ್ನು ಬಂಧಿಸಲಾಗಿದೆ.

ಭರತ್ ಕುಮಾರ್, ಪ್ರದೀಪ್, ಖುಷಿ, ಕುಮಾರ್ ಸೇರಿದಂತೆ ಸ್ನೇಹಿತರು ಪಾಂಡವಪುರ ಸಮೀಪ ಉಕ್ಕಡ ಮಾರಮ್ಮ ದೇವಸ್ಥಾನಕ್ಕೆ ಹೋಗಿದ್ದರು. ಅಲ್ಲಿಂದ ಬೆಂಗಳೂರಿಗೆ ವಾಪಸ್‌ ಬರುವಾಗ ಬಿಡದಿ ಸಮೀಪ ಕೆಂಚನಗುಪ್ಪೆ ಗೇಟ್ ಬಳಿ ಇರುವ ಎಸ್ಎ‌ಲ್‌ಎನ್ ಲಾಡ್ಜ್‌ನಲ್ಲಿ ಬೆಳಗಿನ ಜಾವ ಉಳಿದುಕೊಳ್ಳಲು ಹೋಗಿದ್ದಾರೆ. ಈ ವೇಳೆ ತಮ್ಮ ಜೊತೆಯಲ್ಲಿದ್ದ ಸ್ನೇಹಿತೆಯ ವಿಚಾರವಾಗಿ ಪ್ರದೀಪ್ ಕುಮಾರ್‌ ಮತ್ತು ಭರತ್‌ ಕುಮಾರ್‌ ನಡುವೆ ವಾಗ್ವಾದ ನಡೆದಿದೆ. ಆ ವೇಳೆ ಕುಮಾರ್ ಎಂಬಾತ ಭರತ್‌ಗೆ ಚಾಕುವಿನಿಂದ ಚುಚ್ಚಿದ್ದಾನೆ. ಸ್ನೇಹಿತರು ಭರತ್‌ನನ್ನು ರಾಮನಗರ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಭರತ್‌ನ ಶವವನ್ನು ಬೆಂಗಳೂರು–ಮೈಸೂರು ಹೆದ್ದಾರಿಯ ಮಾಯಗಾನಹಳ್ಳಿ ಸಮೀಪದ ರಸ್ತೆ ಪಕ್ಕದಲ್ಲಿ ಎಸೆದು ಹೋಗಿದ್ದಾರೆ. ವಿಚಾರಣೆ ವೇಳೆ ಕೊಲೆ ಮಾಡಿರುವುದು ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಡದಿ ಪೊಲೀಸ್‌ ಠಾಣೆಯಲ್ಲಿ ‍ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT