<p>ಮಾಗಡಿ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ<br />ಅ. ದೇವೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಶ್ರೀಪತಿಹಳ್ಳಿಯಲ್ಲಿ ನಡೆದ ನಡೆದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ತಿರುಮಲೆ ಮಾಂಡವ್ಯ ಗುಹೆಯ ಸುತ್ತಲಿನ ಸರ್ಕಾರಿ ಜಮೀನು ಗುರುತಿಸಿ ಅಕ್ರಮ ಒತ್ತುವರಿ ತಡೆಗಟ್ಟಬೇಕು. ಗುಹೆಯ ಮೇಲಿನ ಕೆಂಪೇಗೌಡರ ಕಾಲದ ಗೋಪುರವನ್ನು ದುರಸ್ತಿಪಡಿಸಲಾಗುವುದು ಎಂದು<br />ಹೇಳಿದರು.</p>.<p>ಗುಹೆಗೆ ಹೋಗಲು ಇರುವ ಸರ್ಕಾರಿ ರಸ್ತೆಯನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ತಹಶೀಲ್ದಾರ್ಗೆ ಸೂಚಿಸಿದರು.</p>.<p>ಸೋಮೇಶ್ವರ ಸ್ವಾಮಿ ಹಿಂಬದಿ ಇರುವ ಬಂಡೆಯ ಮೇಲಿನ ಕೆಂಪೇಗೌಡರ ಕಲಾತ್ಮಕ ಗೋಪುರಕ್ಕೆ ಹೋಗುತ್ತಿದ್ದ ರಸ್ತೆಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದರು.</p>.<p>ಬಿಜೆಪಿ ಮುಖಂಡ ಅಶ್ವತ್ಥನಾರಾಯಣ ಗೌಡ ಮಾತನಾಡಿ, ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನನಗೆ 65 ಸಾವಿರ ಮತ ನೀಡಿರುವ ಮತದಾರರನ್ನು ಮರೆಯುವುದಿಲ್ಲ. ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮುಖಂಡರಾದ ಬ್ಯಾಲಕೆರೆ ಮಹೇಶಯ್ಯ, ಕಲ್ಯಾ ಗೇಟ್ ದಯಾನಂದ್, ಬಗರ್ ಹುಕುಂ ಸಾಗುವಳಿ ಸಮಿತಿ ಸದಸ್ಯ ರಾಮಪ್ರಸಾದ್, ಪಾಳ್ಯದಹಳ್ಳಿ ಹನುಮಂತೇಗೌಡ, ಗೆಜ್ಜಗಾರುಗುಪ್ಪೆ ಧನಂಜಯ, ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ<br />ಅ. ದೇವೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಶ್ರೀಪತಿಹಳ್ಳಿಯಲ್ಲಿ ನಡೆದ ನಡೆದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.</p>.<p>ತಿರುಮಲೆ ಮಾಂಡವ್ಯ ಗುಹೆಯ ಸುತ್ತಲಿನ ಸರ್ಕಾರಿ ಜಮೀನು ಗುರುತಿಸಿ ಅಕ್ರಮ ಒತ್ತುವರಿ ತಡೆಗಟ್ಟಬೇಕು. ಗುಹೆಯ ಮೇಲಿನ ಕೆಂಪೇಗೌಡರ ಕಾಲದ ಗೋಪುರವನ್ನು ದುರಸ್ತಿಪಡಿಸಲಾಗುವುದು ಎಂದು<br />ಹೇಳಿದರು.</p>.<p>ಗುಹೆಗೆ ಹೋಗಲು ಇರುವ ಸರ್ಕಾರಿ ರಸ್ತೆಯನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸುವಂತೆ ತಹಶೀಲ್ದಾರ್ಗೆ ಸೂಚಿಸಿದರು.</p>.<p>ಸೋಮೇಶ್ವರ ಸ್ವಾಮಿ ಹಿಂಬದಿ ಇರುವ ಬಂಡೆಯ ಮೇಲಿನ ಕೆಂಪೇಗೌಡರ ಕಲಾತ್ಮಕ ಗೋಪುರಕ್ಕೆ ಹೋಗುತ್ತಿದ್ದ ರಸ್ತೆಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದರು.</p>.<p>ಬಿಜೆಪಿ ಮುಖಂಡ ಅಶ್ವತ್ಥನಾರಾಯಣ ಗೌಡ ಮಾತನಾಡಿ, ‘ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನನಗೆ 65 ಸಾವಿರ ಮತ ನೀಡಿರುವ ಮತದಾರರನ್ನು ಮರೆಯುವುದಿಲ್ಲ. ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮುಖಂಡರಾದ ಬ್ಯಾಲಕೆರೆ ಮಹೇಶಯ್ಯ, ಕಲ್ಯಾ ಗೇಟ್ ದಯಾನಂದ್, ಬಗರ್ ಹುಕುಂ ಸಾಗುವಳಿ ಸಮಿತಿ ಸದಸ್ಯ ರಾಮಪ್ರಸಾದ್, ಪಾಳ್ಯದಹಳ್ಳಿ ಹನುಮಂತೇಗೌಡ, ಗೆಜ್ಜಗಾರುಗುಪ್ಪೆ ಧನಂಜಯ, ಜಗದೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>