ರಾಮನಗರ: ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯಲ್ಲಿ ಬೆಂಬಲ ದೊರೆತಿಲ್ಲ.
ಶನಿವಾರ ಮುಂಜಾನೆ ನಗರದೊಳಗಿನ ಜನಜೀವನ ಎಂದಿನಂತೆ ಇದೆ. ಕೆಎಸ್ ಆರ್ ಟಿಸಿ ಬಸ್, ಆಟೊಗಳು ಸಂಚರಿಸುತ್ತಿವೆ. ಅಂಗಡಿ ಮುಂಗಟ್ಟು, ಹೋಟೆಲ್ ಗಳು ತೆರೆದಿವೆ. ರೇಷ್ಮೆಗೂಡು ಮಾರುಕಟ್ಟೆ, ಎಪಿಎಂಸಿಯಲ್ಲೂ ವಹಿವಾಟು ಎಂದಿನಂತೆ ಇದೆ.
ಐಜೂರು ವೃತ್ತದಲ್ಲಿ ಮುಂಜಾನೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೇ ಕಾರ್ಯಕರ್ತರು ವಶಕ್ಕೆ: ರಾಮನಗರ ಐಜೂರು ವೃತ್ತದಲ್ಲಿ ರಸ್ತೆ ತಡೆ ನಡೆಸಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.