<p><strong>ಕನಕಪುರ: </strong>ಅಪರಿಚಿತ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಆರೋಪಿ ಮತ್ತು ಕೊಲೆಯಾದ ಮೃತ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕಗ್ಗಲೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಮಾದಾಪುರ ಗ್ರಾಮದ ಪುಟ್ಟಸ್ವಾಮಿ ಕೊಲೆಯಾದವರು.</p>.<p>ಕೊಲೆ ಮಾಡಿದ ಆರೋಪಿಯನ್ನು ಕಗ್ಗಲೀಪುರ ಸಂಕ್ರಾಂತಿ ವೆಂಚರ್ಸ್ ಲೇಔಟ್ನ ಕಾಂಕ್ರಿಟ್ ಗ್ಯಾಂಗ್ ಆಳುಗಳ ಜತೆ ಕೂಲಿ ಕೆಲಸ ಮಾಡುತ್ತಿದ್ದ ಬಾಪು ಡಾಂಗೆ ಅಲಿಯಾಸ್ ಕಾಶಿ ಕಿಶನ್ ಡಾಂಗೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಕಗ್ಗಲೀಪುರದಲ್ಲಿ ಜ. 21ರಂದು ಪುಟ್ಟಸ್ವಾಮಿ ಮಲಗಿರುವ ಜಾಗಕ್ಕೆ ಆರೋಪಿ ಬಂದು ಜಗಳ ತೆಗೆದಿದ್ದಾನೆ. ಪಕ್ಕದಲ್ಲಿದ್ದ ಸಿಮೆಂಟ್ ಬ್ಲಾಕ್ ಇಟ್ಟಿಗೆಯನ್ನು ತಲೆಯ ಮೇಲೆ ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.</p>.<p>ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಮತ್ತು ಕೊಲೆಗಾರನ ಮೈಮೇಲಿನ ಬಟ್ಟೆಯಲ್ಲಿದ್ದ ರಕ್ತದ ಕಲೆಯಿಂದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಹಾರೋಹಳ್ಳಿ ಸರ್ಕಲ್ ಇನ್ಸ್ಪೆಕ್ಟರ್ ಸಿ. ಸತೀಶ್, ಕಗ್ಗಲೀಪುರ ಎಸ್ಐ ವೆಂಕಟೇಶ್ ಕೆ. ಮತ್ತು ತಂಡ ಕಾರ್ಯಾಚರಣೆ<br />ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಅಪರಿಚಿತ ವ್ಯಕ್ತಿಯನ್ನು ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಆರೋಪಿ ಮತ್ತು ಕೊಲೆಯಾದ ಮೃತ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕಗ್ಗಲೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಮಾದಾಪುರ ಗ್ರಾಮದ ಪುಟ್ಟಸ್ವಾಮಿ ಕೊಲೆಯಾದವರು.</p>.<p>ಕೊಲೆ ಮಾಡಿದ ಆರೋಪಿಯನ್ನು ಕಗ್ಗಲೀಪುರ ಸಂಕ್ರಾಂತಿ ವೆಂಚರ್ಸ್ ಲೇಔಟ್ನ ಕಾಂಕ್ರಿಟ್ ಗ್ಯಾಂಗ್ ಆಳುಗಳ ಜತೆ ಕೂಲಿ ಕೆಲಸ ಮಾಡುತ್ತಿದ್ದ ಬಾಪು ಡಾಂಗೆ ಅಲಿಯಾಸ್ ಕಾಶಿ ಕಿಶನ್ ಡಾಂಗೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಕಗ್ಗಲೀಪುರದಲ್ಲಿ ಜ. 21ರಂದು ಪುಟ್ಟಸ್ವಾಮಿ ಮಲಗಿರುವ ಜಾಗಕ್ಕೆ ಆರೋಪಿ ಬಂದು ಜಗಳ ತೆಗೆದಿದ್ದಾನೆ. ಪಕ್ಕದಲ್ಲಿದ್ದ ಸಿಮೆಂಟ್ ಬ್ಲಾಕ್ ಇಟ್ಟಿಗೆಯನ್ನು ತಲೆಯ ಮೇಲೆ ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.</p>.<p>ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಮತ್ತು ಕೊಲೆಗಾರನ ಮೈಮೇಲಿನ ಬಟ್ಟೆಯಲ್ಲಿದ್ದ ರಕ್ತದ ಕಲೆಯಿಂದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಹಾರೋಹಳ್ಳಿ ಸರ್ಕಲ್ ಇನ್ಸ್ಪೆಕ್ಟರ್ ಸಿ. ಸತೀಶ್, ಕಗ್ಗಲೀಪುರ ಎಸ್ಐ ವೆಂಕಟೇಶ್ ಕೆ. ಮತ್ತು ತಂಡ ಕಾರ್ಯಾಚರಣೆ<br />ನಡೆಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>