ಮಾಗಡಿ: ತಾಲ್ಲೂಕಿನ ಗುಡೇಮಾರನಹಳ್ಳಿ ಕೆರೆಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಸಿದ್ದರಾಜು (45) ಮೃತಪಟ್ಟವರು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ಎನ್. ಉದಯ್ ಕುಮಾರ್ ನೇತೃತ್ವದ ಸಿಬ್ಬಂದಿಯಾದ ಬಲರಾಮ, ಅಪ್ಪಯ್ಯ, ಶಿವಕುಮಾರ್ ತಂಡ ಎರಡು ಗಂಟೆಗಳ ಕಾಲ ಶ್ರಮಪಟ್ಟು ಶವವನ್ನು ಹೊರ ತೆಗೆಯಿತು.