<p><strong>ಕನಕಪುರ:</strong> ಕನಕಪುರದ ಶಕ್ತಿ ದೇವತೆ ಕೆಂಕೇರಮ್ಮ ದೇಗುಲದ ಬಾಗಿಲು ಒಡೆದು ಕಳ್ಳರು ಚಿನ್ನಾಭರಣ ಹಾಗೂ ಹುಂಡಿ ಹಣ ದೋಚಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>ಕೆಂಕೇರಮ್ಮ ದೇವಾಲಯವು ಜನವಸತಿ ಬಡಾವಣೆಯಲ್ಲಿದ್ದರೂ ಕಳ್ಳರು ಕಾಂಪೌಂಡ್ ಹಾರಿ, ದೇವಾಲಯದ ಹೆಬ್ಬಾಗಿಲನ್ನು ಒಡೆದು ದೇವಿ ಮೈ ಮೇಲಿದ್ದ ಚಿನ್ನದ ತಾಳಿ ಮತ್ತು ಬೆಳ್ಳಿ ಒಡವೆ ಹಾಗೂ ಎರಡು ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಜೊತೆಗೆ ಹುಂಡಿಯನ್ನು ದೇವಾಲಯ ಆವರಣದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.</p>.<p>ಬೆಳಿಗ್ಗೆ ಅರ್ಚಕರು ದೇವಾಲಯದ ಬಳಿ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಟ್ರಸ್ಟ್ ಅಧ್ಯಕ್ಷ ಚಿಕ್ಕಲಿಂಗಯ್ಯ ಕನಕಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಎರಡು ಹುಂಡಿಗಳ ತುಂಬ ಹಣವಿತ್ತು. ಜೊತೆಗೆ ದೇವಿ ಮೈಮೇಲಿದ್ದ 12 ಗ್ರಾಂ ಚಿನ್ನ ಹಾಗೂ 200 ಗ್ರಾಂ ಬೆಳ್ಳಿ ಆಭರಣಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ನಗರ ವಿಭಾಗದ ಸರ್ಕಲ್ ಇನ್ಸ್ಪೆಕ್ಟರ್ ಅನಂತರಾಮ್, ಎಎಸ್ಐ ಪದ್ಮನಾಭ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸ್ಥಳೀಯರು ಹಾಗೂ ದೇವಾಲಯ ಸಮಿತಿ ಅವರಿಂದ ಮಾಹಿತಿ ಪಡೆದಿದ್ದಾರೆ. ಬೆರಳಚ್ಚು ತಂಡವು ದೇವಾಲಯದಲ್ಲಿ ಪರಿಶೋಧನೆ ನಡೆಸಿ ಸಿಸಿಟಿವಿ ಕ್ಯಾಮೆರಾಗಳ ಫೋಟೋಗಳನ್ನು ಕಲೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕನಕಪುರದ ಶಕ್ತಿ ದೇವತೆ ಕೆಂಕೇರಮ್ಮ ದೇಗುಲದ ಬಾಗಿಲು ಒಡೆದು ಕಳ್ಳರು ಚಿನ್ನಾಭರಣ ಹಾಗೂ ಹುಂಡಿ ಹಣ ದೋಚಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.</p>.<p>ಕೆಂಕೇರಮ್ಮ ದೇವಾಲಯವು ಜನವಸತಿ ಬಡಾವಣೆಯಲ್ಲಿದ್ದರೂ ಕಳ್ಳರು ಕಾಂಪೌಂಡ್ ಹಾರಿ, ದೇವಾಲಯದ ಹೆಬ್ಬಾಗಿಲನ್ನು ಒಡೆದು ದೇವಿ ಮೈ ಮೇಲಿದ್ದ ಚಿನ್ನದ ತಾಳಿ ಮತ್ತು ಬೆಳ್ಳಿ ಒಡವೆ ಹಾಗೂ ಎರಡು ಹುಂಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ಜೊತೆಗೆ ಹುಂಡಿಯನ್ನು ದೇವಾಲಯ ಆವರಣದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.</p>.<p>ಬೆಳಿಗ್ಗೆ ಅರ್ಚಕರು ದೇವಾಲಯದ ಬಳಿ ಹೋಗಿ ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಟ್ರಸ್ಟ್ ಅಧ್ಯಕ್ಷ ಚಿಕ್ಕಲಿಂಗಯ್ಯ ಕನಕಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಎರಡು ಹುಂಡಿಗಳ ತುಂಬ ಹಣವಿತ್ತು. ಜೊತೆಗೆ ದೇವಿ ಮೈಮೇಲಿದ್ದ 12 ಗ್ರಾಂ ಚಿನ್ನ ಹಾಗೂ 200 ಗ್ರಾಂ ಬೆಳ್ಳಿ ಆಭರಣಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ನಗರ ವಿಭಾಗದ ಸರ್ಕಲ್ ಇನ್ಸ್ಪೆಕ್ಟರ್ ಅನಂತರಾಮ್, ಎಎಸ್ಐ ಪದ್ಮನಾಭ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸ್ಥಳೀಯರು ಹಾಗೂ ದೇವಾಲಯ ಸಮಿತಿ ಅವರಿಂದ ಮಾಹಿತಿ ಪಡೆದಿದ್ದಾರೆ. ಬೆರಳಚ್ಚು ತಂಡವು ದೇವಾಲಯದಲ್ಲಿ ಪರಿಶೋಧನೆ ನಡೆಸಿ ಸಿಸಿಟಿವಿ ಕ್ಯಾಮೆರಾಗಳ ಫೋಟೋಗಳನ್ನು ಕಲೆ ಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>