ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಇಬ್ಬರು ಸರಗಳ್ಳರ ಬಂಧನ

Last Updated 12 ಅಕ್ಟೋಬರ್ 2022, 4:16 IST
ಅಕ್ಷರ ಗಾತ್ರ

ಮಾಗಡಿ: ಇತ್ತೀಚೆಗೆ ಬೈಕ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತರನ್ನು ಕೆಂಗೇರಿಯ ಉತ್ತರಹಳ್ಳಿ ರಸ್ತೆಯ ಗಾಣಕಲ್ಲು ನಿವಾಸಿ ರಂಗನಾಥ (32) ಹಾಗೂ ಮಂಜು ಪಿ.(27) ಎಂದು ಗುರುತಿಸಲಾಗಿದೆ. ಬಂಧಿತರಿಂದ 35 ಗ್ರಾಂ ತೂಕದ ಮಾಂಗಲ್ಯ ಸರವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ
ನೀಡಿದರು.

ಇಲ್ಲಿನ ಸೋಲೂರಿನಲ್ಲಿ ಸೆಪ್ಟೆಂಬರ್ 21ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ವಿಳಾಸ ಕೇಳುವ ನೆಪದಲ್ಲಿ ಬಂದು ಬಟ್ಟೆ ತೊಳೆಯುತ್ತಿದ್ದ ಮಹಿಳೆ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದರು. ಈ ಸಂಬಂಧ ಅದೇ ದಿನ ಸಂತ್ರಸ್ತ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು.

ಎಸ್‌ಪಿ ಸಂತೋಷ್ ಬಾಬು ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಯು.ಡಿ. ಕೃಷ್ಣಕುಮಾರ್ ನೇತೃತ್ವದಡಿತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT