<p><strong>ಮಾಗಡಿ</strong>: ಸಹೃದಯಿಗಳ ನೆರವಿನಿಂದ ಉತ್ತಮ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದ ಸೋಲಿಗ ಕುಟುಂಬವೊಂದರ ಕನಸನ್ನು ಕಳ್ಳರು ನುಚ್ಚುನೂರು ಮಾಡಿದ್ದಾರೆ.</p>.<p>ಪಟ್ಟಣದ ತಿರುಮಲೆ ಪ್ರದೇಶದಲ್ಲಿ ಕೊಳೆಗೇರಿ ನಿರ್ಮೂಲನಾ ಮಂಡಳಿಗೆ ಸೇರಿದ ಜಾಗದಲ್ಲಿ ತಾತ್ಕಾಲಿಕ ಶೆಡ್ನಲ್ಲಿ ಆಶ್ರಯ ಪಡೆದುಕೊಂಡಿದ್ದ ಈ ಕುಟುಂಬಕ್ಕೆ ದಾನಿಗಳು ನೀಡಿದ್ದ ದವಸ–ಧಾನ್ಯ, ಬಟ್ಟೆ, ಹಣ ಎಲ್ಲವನ್ನೂ ಕಳ್ಳರು ಗುರುವಾರ ರಾತ್ರಿ ದೋಚಿದ್ದಾರೆ.</p>.<p>ಸೋಲಿಗ ಸಮುದಾಯಕ್ಕೆ ಸೇರಿದ ಭೀಮ (ಮಂಜುನಾಥ್) ಮತ್ತವರ ಕುಟುಂಬ ಯಾವುದೇ ಆಸರೆ ಇಲ್ಲದೆ ಭಿಕ್ಷಾಟನೆ ಮಾಡಿ ಬಯಲಿನಲ್ಲೇ ಮಕ್ಕಳೊಂದಿಗೆ ವಾಸವಿರುವ ಸಂಕಷ್ಟದ ಕುರಿತು ‘ಪ್ರಜಾವಾಣಿ’ ಜೂನ್ 14ರಂದು ವರದಿ ಪ್ರಕಟಿಸಿತ್ತು. ಈ ವರದಿಗೆ ನಾಡಿನ ವಿವಿಧೆಡೆಯಿಂದ ಜನರು ಸ್ಪಂದಿಸಿದ್ದು, ವರ್ಷಕ್ಕೆ ಆಗುವಷ್ಟು ಧಾನ್ಯ ಮತ್ತಿತರ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದರು.</p>.<p>ಘಟನೆ ಕುರಿತು ಮಾಗಡಿ ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಪ್ರಸಾದ್ ಪ್ರತಿಕ್ರಿಯಿಸಿದ್ದು ‘ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಸೋಲಿಗ ಕುಟುಂಬಕ್ಕೆ ತಾತ್ಕಾಲಿಕ ಮನೆ ಜೊತೆಗೆ ಅಗತ್ಯ ಅನುಕೂಲ ಮಾಡಿಕೊಡಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಸಹೃದಯಿಗಳ ನೆರವಿನಿಂದ ಉತ್ತಮ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದ ಸೋಲಿಗ ಕುಟುಂಬವೊಂದರ ಕನಸನ್ನು ಕಳ್ಳರು ನುಚ್ಚುನೂರು ಮಾಡಿದ್ದಾರೆ.</p>.<p>ಪಟ್ಟಣದ ತಿರುಮಲೆ ಪ್ರದೇಶದಲ್ಲಿ ಕೊಳೆಗೇರಿ ನಿರ್ಮೂಲನಾ ಮಂಡಳಿಗೆ ಸೇರಿದ ಜಾಗದಲ್ಲಿ ತಾತ್ಕಾಲಿಕ ಶೆಡ್ನಲ್ಲಿ ಆಶ್ರಯ ಪಡೆದುಕೊಂಡಿದ್ದ ಈ ಕುಟುಂಬಕ್ಕೆ ದಾನಿಗಳು ನೀಡಿದ್ದ ದವಸ–ಧಾನ್ಯ, ಬಟ್ಟೆ, ಹಣ ಎಲ್ಲವನ್ನೂ ಕಳ್ಳರು ಗುರುವಾರ ರಾತ್ರಿ ದೋಚಿದ್ದಾರೆ.</p>.<p>ಸೋಲಿಗ ಸಮುದಾಯಕ್ಕೆ ಸೇರಿದ ಭೀಮ (ಮಂಜುನಾಥ್) ಮತ್ತವರ ಕುಟುಂಬ ಯಾವುದೇ ಆಸರೆ ಇಲ್ಲದೆ ಭಿಕ್ಷಾಟನೆ ಮಾಡಿ ಬಯಲಿನಲ್ಲೇ ಮಕ್ಕಳೊಂದಿಗೆ ವಾಸವಿರುವ ಸಂಕಷ್ಟದ ಕುರಿತು ‘ಪ್ರಜಾವಾಣಿ’ ಜೂನ್ 14ರಂದು ವರದಿ ಪ್ರಕಟಿಸಿತ್ತು. ಈ ವರದಿಗೆ ನಾಡಿನ ವಿವಿಧೆಡೆಯಿಂದ ಜನರು ಸ್ಪಂದಿಸಿದ್ದು, ವರ್ಷಕ್ಕೆ ಆಗುವಷ್ಟು ಧಾನ್ಯ ಮತ್ತಿತರ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದರು.</p>.<p>ಘಟನೆ ಕುರಿತು ಮಾಗಡಿ ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಪ್ರಸಾದ್ ಪ್ರತಿಕ್ರಿಯಿಸಿದ್ದು ‘ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಸೋಲಿಗ ಕುಟುಂಬಕ್ಕೆ ತಾತ್ಕಾಲಿಕ ಮನೆ ಜೊತೆಗೆ ಅಗತ್ಯ ಅನುಕೂಲ ಮಾಡಿಕೊಡಲಾಗುವುದು’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>