ಪ್ರಸಾದ ನಿಲಯದಲ್ಲಿ ಉಚಿತ ಪ್ರಸಾದಕ್ಕೆ ಕಾಣಿಕೆ ಸಲ್ಲಿಸಲು ಅನುಕೂಲವಾಗುವಂತೆ ದೊಡ್ಡ ಗಾತ್ರದ ಹುಂಡಿ ಇಡಲಾಗಿದೆ. ಕಳ್ಳರು ದಾಸೋಹ ಭವನದ ಒಳಗೆ ನುಗ್ಗಿ ಬಂದು ಹುಂಡಿಯನ್ನು ಅಲ್ಲಿಂದ ತೆಗೆದುಕೊಂಡು ಹೋಗಿ ಪಕ್ಕದ ಮಾವಿನ ತೋಟದಲ್ಲಿ ಇಟ್ಟು ಕಬ್ಬಿಣದ ಆಯುಧಗಳಿಂದ ಹುಂಡಿ ಒಡೆದು ಅದರಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.
ಹುಂಡಿಯನ್ನು ಕಳೆದ ನಾಲ್ಕೈದು ತಿಂಗಳಿಂದ ಒಡೆದಿರಲಿಲ್ಲ. ಪ್ರತಿದಿನ ಬರುವ ಭಕ್ತರು ಹುಂಡಿಗೆ ಹಣ ಹಾಕುವುದರಿಂದ ಹೆಚ್ಚಿನ ಪ್ರಮಾಣದ ಹಣ ಸಂಗ್ರಹವಾಗುತ್ತದೆ. ಹಣ ಎಷ್ಟಿತ್ತು ಎಂಬುದು ನಿಖರವಾಗಿ ತಿಳಿದು ಬಂದಿಲ್ಲ.