ಉದ್ದೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 500 ಗ್ರಾಂ ತೂಕದ ಬೆಳ್ಳಿ ಕಿರೀಟ ಹಾಗೂ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ಜತೆಗೆ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರ ಮೈಮೇಲಿದ್ದ ನಾಲ್ಕು ಚಿನ್ನದ ತಾಳಿ, ಎರಡು ಬೆಳ್ಳಿ ತಾಳಿ ಮತ್ತು ನಾಲ್ಕು ಗಂಟೆಗಳನ್ನು ಕದ್ದೊಯ್ದಿದ್ದಾರೆ ಎಂದು ದೇವಾಲಯದ ಅರ್ಚಕ ಕೃಷ್ಣಮೂರ್ತಿ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.