<p><strong>ಮಾಗಡಿ:</strong> ಅಂದು ಹಿಂದುಳಿದ ವರ್ಗಗಳ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಮಾದರಿ ಆಡಳಿತವನ್ನು ಸಹಿಸದೇ ಅವರನ್ನು ಅಧಿಕಾರದಿಂದ ಇಳಿಸಲು ಷಢ್ಯಂತ್ರ ರೂಪಿಸಲಾಗಿತ್ತು. ಹಾಗೆಯೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಡಾ ಹಗರಣದಲ್ಲಿ ಸಿಲುಕಿಸುವ ಕುತಂತ್ರ ನಡೆಯುತ್ತಿದೆ. ಆದರೆ, ವಿರೋಧ ಪಕ್ಷದ ಈ ಪ್ರಯತ್ನ ಸಫಲವಾಗುವುದಿಲ್ಲ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರವಾಗಿ ವಿರೋಧ ಪಕ್ಷದವರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ವಿರೋಧ ಪಕ್ಷದವರು ಜನಪರ ಆಡಳಿತ ನಡೆಸುತ್ತಿರುವ ಹಿಂದುಳಿದ ನಾಯಕ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕುವ ಹುನ್ನಾರ ಮಾಡುತ್ತಿದ್ದಾರೆ ಎಂದರು.</p>.<p>‘ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 84 ನಿವೇಶನಗಳು ಹಂಚಿಕೆಯಾಗಿರುವ ಬಗ್ಗೆ ದಾಖಲೆಗಳಿವೆ. ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗಪಡಿಸಲಾಗುತ್ತದೆ. ಇವತ್ತಲ್ಲ ನಾಳೆ ಕುಮಾರಸ್ವಾಮಿ ಜೈಲಿಗೆ ಹೋಗುವುದು ನಿಶ್ಚಿತ’ ಎಂದು ಅವರು ಹೇಳಿದರು.</p>.<p>ಮುಖಂಡರಾದ ರಾಜೇಂದ್ರ ಪಾಲ್ ಸಿಂಗ್, ಶಿವರಾಮ್, ಪ್ರಗತಿಪರ ರೈತ ಕುಂಬಳಕಾಯಿ ಗಂಗಣ್ಣ, ಹೊಂಬಾಳಮ್ಮನಪೇಟೆ ತೇಜಸ್ ಕುಮಾರ್, ವಿಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ಅಂದು ಹಿಂದುಳಿದ ವರ್ಗಗಳ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಮಾದರಿ ಆಡಳಿತವನ್ನು ಸಹಿಸದೇ ಅವರನ್ನು ಅಧಿಕಾರದಿಂದ ಇಳಿಸಲು ಷಢ್ಯಂತ್ರ ರೂಪಿಸಲಾಗಿತ್ತು. ಹಾಗೆಯೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಡಾ ಹಗರಣದಲ್ಲಿ ಸಿಲುಕಿಸುವ ಕುತಂತ್ರ ನಡೆಯುತ್ತಿದೆ. ಆದರೆ, ವಿರೋಧ ಪಕ್ಷದ ಈ ಪ್ರಯತ್ನ ಸಫಲವಾಗುವುದಿಲ್ಲ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರವಾಗಿ ವಿರೋಧ ಪಕ್ಷದವರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ವಿರೋಧ ಪಕ್ಷದವರು ಜನಪರ ಆಡಳಿತ ನಡೆಸುತ್ತಿರುವ ಹಿಂದುಳಿದ ನಾಯಕ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕುವ ಹುನ್ನಾರ ಮಾಡುತ್ತಿದ್ದಾರೆ ಎಂದರು.</p>.<p>‘ದೇವೇಗೌಡರ ಕುಟುಂಬಕ್ಕೆ ಮುಡಾದಿಂದ 84 ನಿವೇಶನಗಳು ಹಂಚಿಕೆಯಾಗಿರುವ ಬಗ್ಗೆ ದಾಖಲೆಗಳಿವೆ. ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗಪಡಿಸಲಾಗುತ್ತದೆ. ಇವತ್ತಲ್ಲ ನಾಳೆ ಕುಮಾರಸ್ವಾಮಿ ಜೈಲಿಗೆ ಹೋಗುವುದು ನಿಶ್ಚಿತ’ ಎಂದು ಅವರು ಹೇಳಿದರು.</p>.<p>ಮುಖಂಡರಾದ ರಾಜೇಂದ್ರ ಪಾಲ್ ಸಿಂಗ್, ಶಿವರಾಮ್, ಪ್ರಗತಿಪರ ರೈತ ಕುಂಬಳಕಾಯಿ ಗಂಗಣ್ಣ, ಹೊಂಬಾಳಮ್ಮನಪೇಟೆ ತೇಜಸ್ ಕುಮಾರ್, ವಿಜಯ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>