<p><strong>ಬಿಡದಿ:</strong> ದೆಹಲಿಯ ನಿಜಾಮುದ್ದೀನ್ನಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರು ಆಗಮಿಸಿದ್ದು, ಅವರು ಕೋವಿಡ್–19ಕ್ಕೆ ತುತ್ತಾಗಿದ್ದಾರೆ ಎಂಬ ವದಂತಿಯುಪಟ್ಟಣದಲ್ಲಿ ಹರಡಿದ್ದು ಜನರಲ್ಲಿ ಆತಂಕ ಮನೆ ಮಾಡಿತ್ತು.</p>.<p>ಸಾಮಾಜಿಕ ಜಾಲತಾಣದಲ್ಲಿ ಬುಧವಾರ ಬೆಳಿಗ್ಗೆ ಮೂಲಕ ಹರಿದಾಡುತ್ತಿದ್ದಂತೆ ತಹಶೀಲ್ದಾರ್ ನರಸಿಂಹಮೂರ್ತಿ, ಆರೋಗ್ಯ ಇಲಾಖೆ ಮತ್ತು ಪುರಸಭಾ ಅಧಿಕಾರಿಗಳು ವ್ಯಕ್ತಿಯ ಮಾಹಿತಿ ಕಲೆಹಾಕಲು ದೌಡಾಯಿಸಿದರು.</p>.<p>ಆದರೆ, ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳಿಲ್ಲ. ಬಿಡದಿಯಿಂದ ದೆಹಲಿಗೆ ಆರು ಮಂದಿ ತೆರಳಿದ್ದರು. ಅವರಲ್ಲಿ ಒಬ್ಬರು ಮಾತ್ರ ಬಿಡದಿಗೆ ಹಿಂದಿರುಗಿದ್ದಾರೆ. ಉಳಿದವರು ದೆಹಲಿಯಲ್ಲಿಯೇ ಇದ್ದಾರೆ. ಬಂದಿರುವ ವ್ಯಕ್ತಿಯನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ ಎಂದು ತಹಶೀಲ್ದಾರ್ ನರಸಿಂಹಮೂರ್ತಿ ಸ್ಪಷ್ಟನೆ ನೀಡಿದ್ದಾರೆ.</p>.<p>ಇಂದಿರಾನಗರ ಬಿಡದಿ ಮುಖ್ಯರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ವ್ಯಕ್ತಿಗಳ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ಸಂಜೆವರೆಗೂ ಅಧಿಕಾರಿಗಳು ನಿರತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ:</strong> ದೆಹಲಿಯ ನಿಜಾಮುದ್ದೀನ್ನಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರು ಆಗಮಿಸಿದ್ದು, ಅವರು ಕೋವಿಡ್–19ಕ್ಕೆ ತುತ್ತಾಗಿದ್ದಾರೆ ಎಂಬ ವದಂತಿಯುಪಟ್ಟಣದಲ್ಲಿ ಹರಡಿದ್ದು ಜನರಲ್ಲಿ ಆತಂಕ ಮನೆ ಮಾಡಿತ್ತು.</p>.<p>ಸಾಮಾಜಿಕ ಜಾಲತಾಣದಲ್ಲಿ ಬುಧವಾರ ಬೆಳಿಗ್ಗೆ ಮೂಲಕ ಹರಿದಾಡುತ್ತಿದ್ದಂತೆ ತಹಶೀಲ್ದಾರ್ ನರಸಿಂಹಮೂರ್ತಿ, ಆರೋಗ್ಯ ಇಲಾಖೆ ಮತ್ತು ಪುರಸಭಾ ಅಧಿಕಾರಿಗಳು ವ್ಯಕ್ತಿಯ ಮಾಹಿತಿ ಕಲೆಹಾಕಲು ದೌಡಾಯಿಸಿದರು.</p>.<p>ಆದರೆ, ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಲಕ್ಷಣಗಳಿಲ್ಲ. ಬಿಡದಿಯಿಂದ ದೆಹಲಿಗೆ ಆರು ಮಂದಿ ತೆರಳಿದ್ದರು. ಅವರಲ್ಲಿ ಒಬ್ಬರು ಮಾತ್ರ ಬಿಡದಿಗೆ ಹಿಂದಿರುಗಿದ್ದಾರೆ. ಉಳಿದವರು ದೆಹಲಿಯಲ್ಲಿಯೇ ಇದ್ದಾರೆ. ಬಂದಿರುವ ವ್ಯಕ್ತಿಯನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ ಎಂದು ತಹಶೀಲ್ದಾರ್ ನರಸಿಂಹಮೂರ್ತಿ ಸ್ಪಷ್ಟನೆ ನೀಡಿದ್ದಾರೆ.</p>.<p>ಇಂದಿರಾನಗರ ಬಿಡದಿ ಮುಖ್ಯರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ವ್ಯಕ್ತಿಗಳ ಮಾಹಿತಿ ಕಲೆ ಹಾಕುವ ಕೆಲಸದಲ್ಲಿ ಸಂಜೆವರೆಗೂ ಅಧಿಕಾರಿಗಳು ನಿರತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>