ಯಕ್ಷಗಾನ ಗುರುಗಳಾದ ಗೋಪಾಲಕೃಷ್ಣ ಭಟ್, ವಿಟ್ಲ ಗೋಪಾಲಕೃಷ್ಣ ಜೋಷಿ, ಕುಡಾಣ ಗೋಪಾಲಕೃಷ್ಣ ಭಟ್ ಅವರಿಂದ ಯಕ್ಷಗಾನದ ಅನುಭವವನ್ನು ಕಲಿತುಕೊಂಡು ಕುಣಿತ, ಅರ್ಥಗಾರಿಕೆ, ರಂಗನಡೆ ಇತ್ಯಾದಿಗಳನ್ನು ಅಭ್ಯಾಸ ಮಾಡಿದೆ. ಸುರತ್ಕಲ್ ಮೇಳದಲ್ಲಿ 40 ವರ್ಷ ದುಡಿದೆ. ಇತರ ಮೇಳಗಳಾದ ಕೂಡ್ಲು, ಮುಲ್ಕಿ, ಕರ್ನಾಟಕ, ಮಂಗಳಾದೇವಿ, ಎಡನೀರು, ಕುಂಟಾರು, ಹೊಸನಗರ ಮೇಳಗಳಲ್ಲಿ 63 ವರ್ಷಗಳ ಕಾಲ ಬಣ್ಣ ಹಚ್ಚಿದ್ದೇನೆ ಎಂದರು.