ಕನಕಪುರ: ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಅನಾಮಧೇಯ ವ್ಯಕ್ತಿಗಳು ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಬೆದರಿಕೆ ಹಾಕುತ್ತಿದ್ದಾರೆ. ಒತ್ತಡ ತಂತ್ರ ಅನುಸರಿಸುತ್ತಿದ್ದು ಅವರಿಂದ ಅಭ್ಯರ್ಥಿಗಳನ್ನು ರಕ್ಷಿಸಲು ಪ್ರವಾಸ ಹೊರಟಿರುವುದಾಗಿ ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗಾನಂದ ತಿಳಿಸಿದ್ದಾರೆ.