<p><strong>ಚನ್ನಪಟ್ಟಣ </strong>: ತಾಲ್ಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿರುವ ಸರ್ಕಾರಿ ಬಾಲಮಂದಿರದಿಂದ ಮೂರು ದಿನಗಳ ಹಿಂದೆ ಮೂವರು ಬಾಲಕರು ತಪ್ಪಿಸಿಕೊಂಡಿದ್ದು, ಈ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಮಂಡ್ಯದ ಬಾಲಮಂದಿರದಲ್ಲಿದ್ದ 16 ವರ್ಷದೊಳಗಿನ ಈ ಬಾಲಕರನ್ನು ಇತ್ತೀಚೆಗೆ ವಂದಾರಗುಪ್ಪೆಗೆ ಸ್ಥಳಾಂತರಿಸಲಾಗಿತ್ತು. ಸೆ. 17ರಂದು ಬೆಳಿಗ್ಗೆ 8.30ಕ್ಕೆ ಮುಖ ತೊಳೆಯುವ ನೆಪದಲ್ಲಿ ರಕ್ಷಕ ಸಿಬ್ಬಂದಿ ಸಿದ್ದರಾಜು ಅವರ ಕಣ್ತಪ್ಪಿಸಿ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ.</p><p>ವಿಷಯ ಗೊತ್ತಾಗುತ್ತಿದ್ದಂತೆ, ಸುತ್ತಮುತ್ತಲಿನ ಸ್ಥಳಗಳಲ್ಲಿ ಹುಡುಕಾಡಿದರೂ ಬಾಲಕರು ಪತ್ತೆಯಾಗಿಲ್ಲ. ಬಾಲಮಂದಿರದಲ್ಲಿರುವ 37 ಮಕ್ಕಳನ್ನು ನೋಡಿಕೊಳ್ಳಲು ಹಗಲು ರಾತ್ರಿ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದರೂ, ಸಿಬ್ಬಂದಿ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಬಾಲಮಂದಿರದ ಬಾಲಮಂದಿರದ ಅಧೀಕ್ಷಕ ಹರೀಶ್ ಕುಮಾರ್ ಎನ್. ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ </strong>: ತಾಲ್ಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿರುವ ಸರ್ಕಾರಿ ಬಾಲಮಂದಿರದಿಂದ ಮೂರು ದಿನಗಳ ಹಿಂದೆ ಮೂವರು ಬಾಲಕರು ತಪ್ಪಿಸಿಕೊಂಡಿದ್ದು, ಈ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>ಮಂಡ್ಯದ ಬಾಲಮಂದಿರದಲ್ಲಿದ್ದ 16 ವರ್ಷದೊಳಗಿನ ಈ ಬಾಲಕರನ್ನು ಇತ್ತೀಚೆಗೆ ವಂದಾರಗುಪ್ಪೆಗೆ ಸ್ಥಳಾಂತರಿಸಲಾಗಿತ್ತು. ಸೆ. 17ರಂದು ಬೆಳಿಗ್ಗೆ 8.30ಕ್ಕೆ ಮುಖ ತೊಳೆಯುವ ನೆಪದಲ್ಲಿ ರಕ್ಷಕ ಸಿಬ್ಬಂದಿ ಸಿದ್ದರಾಜು ಅವರ ಕಣ್ತಪ್ಪಿಸಿ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ.</p><p>ವಿಷಯ ಗೊತ್ತಾಗುತ್ತಿದ್ದಂತೆ, ಸುತ್ತಮುತ್ತಲಿನ ಸ್ಥಳಗಳಲ್ಲಿ ಹುಡುಕಾಡಿದರೂ ಬಾಲಕರು ಪತ್ತೆಯಾಗಿಲ್ಲ. ಬಾಲಮಂದಿರದಲ್ಲಿರುವ 37 ಮಕ್ಕಳನ್ನು ನೋಡಿಕೊಳ್ಳಲು ಹಗಲು ರಾತ್ರಿ ಮೂರು ಪಾಳಿಯಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದರೂ, ಸಿಬ್ಬಂದಿ ನಿರ್ಲಕ್ಷ್ಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಬಾಲಮಂದಿರದ ಬಾಲಮಂದಿರದ ಅಧೀಕ್ಷಕ ಹರೀಶ್ ಕುಮಾರ್ ಎನ್. ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>