ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಿಹೊಸೂರು ವಿದ್ಯಾರ್ಥಿನಿಗೆ ಮೂರು ಚಿನ್ನದ ಪದಕ

Last Updated 2 ಮೇ 2022, 14:47 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಕಳ್ಳಿಹೊಸೂರು ಗ್ರಾಮದ ವಿದ್ಯಾರ್ಥಿನಿ ಕೆ.ಬಿ. ಕುಶಲ ಅವರು ಮೀನುಗಾರಿಕೆ ಸೂಕ್ಷ್ಮ ಜೀವ ವಿಜ್ಞಾನ ಸ್ನಾತಕೋತ್ತರ ಪದವಿಯಲ್ಲಿ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಗ್ರಾಮದ ಸುಮ ಬೋರೇಗೌಡ ದಂಪತಿ ಪುತ್ರಿಯಾದ ಇವರು ಬೀದರ್‌ನ ಕರ್ನಾಟಕ ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (ಕೆ.ವಿ.ಎ.ಎಫ್.ಎಸ್.ಯು.) ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಈಚೆಗೆ ನಡೆದ ವಿಶ್ವವಿದ್ಯಾಲಯದ 12 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಿನ್ನದ ಪದಕಗಳನ್ನು ಹಾಗೂ ಸ್ನಾತಕೋತ್ತರ ಪ್ರಮಾಣಪತ್ರ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT