<p><strong>ಕನಕಪುರ:</strong> ಪಿತ್ರಾರ್ಜಿತ ಆಸ್ತಿ ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಮೂವರು ಕಂದಾಯ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಕಂದಾಯ ನಿರೀಕ್ಷಕ ತಂಗರಾಜು, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ, ಕಂಪ್ಯೂಟರ್ ಆಪರೇಟರ್ ಉಮೇಶ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಪಿರ್ತಾರ್ಜಿತ ಆಸ್ತಿ ಪೌತಿ ಖಾತೆ ಮಾಡಲು ಅರಳಿಗುಡ್ಡೆ ತಾಂಡ್ಯದ ಬಲರಾಮ ನಾಯ್ಕ್ 2022ರಲ್ಲಿ ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ಪೌತಿ ಖಾತೆ ಮಾಡಿಕೊಡದೆ ತಡೆ ಮಾಡಿದ್ದಾರೆ. ಖಾತೆ ಬದಲಾವಣೆಗಾಗಿ ಮೂರು ವರ್ಷ ಕಚೇರಿಗೆ ಅಲೆದಾಡಿ ಸುಮ್ಮನಾಗಿದ್ದರು.</p>.<p>ತಂಗರಾಜು ಹಾಗೂ ಚಂದ್ರೇಗೌಡ ಅವರನ್ನು ಸಂಪರ್ಕಿಸಿದಾಗ ಖಾತೆ ಮಾಡಿ ಕೊಡಲು ₹5.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. </p>.<p>ಲೋಕಾಯುಕ್ತ ಅಧಿಕಾರಿಗಳ ಸೂಚನೆಯಂತೆ ಇಬ್ಬರಿಗೂ ₹2 ಲಕ್ಷ ಮುಂಗಡ ಕೊಟ್ಟಿದ್ದ ದೂರುದಾರರು, ಬುಧವಾರ ಕಚೇರಿಯಲ್ಲಿ ₹2 ಲಕ್ಷ ಲಂಚ ಕೊಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದರು.</p>.<p>ಜಿಲ್ಲಾ ಲೋಕಾಯುಕ್ತ ಎಸ್.ಪಿ ಸ್ನೇಹಾ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಅಧಿಕಾರಿಗಳಾದ ವಿಜಯ್ಕುಮಾರ್, ಸಂದೀಪ್ಕುಮಾರ್ ಹಾಗು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಪಿತ್ರಾರ್ಜಿತ ಆಸ್ತಿ ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಮೂವರು ಕಂದಾಯ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.</p>.<p>ಕಂದಾಯ ನಿರೀಕ್ಷಕ ತಂಗರಾಜು, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ, ಕಂಪ್ಯೂಟರ್ ಆಪರೇಟರ್ ಉಮೇಶ್ ಎಂಬುವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p>.<p>ಪಿರ್ತಾರ್ಜಿತ ಆಸ್ತಿ ಪೌತಿ ಖಾತೆ ಮಾಡಲು ಅರಳಿಗುಡ್ಡೆ ತಾಂಡ್ಯದ ಬಲರಾಮ ನಾಯ್ಕ್ 2022ರಲ್ಲಿ ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ಪೌತಿ ಖಾತೆ ಮಾಡಿಕೊಡದೆ ತಡೆ ಮಾಡಿದ್ದಾರೆ. ಖಾತೆ ಬದಲಾವಣೆಗಾಗಿ ಮೂರು ವರ್ಷ ಕಚೇರಿಗೆ ಅಲೆದಾಡಿ ಸುಮ್ಮನಾಗಿದ್ದರು.</p>.<p>ತಂಗರಾಜು ಹಾಗೂ ಚಂದ್ರೇಗೌಡ ಅವರನ್ನು ಸಂಪರ್ಕಿಸಿದಾಗ ಖಾತೆ ಮಾಡಿ ಕೊಡಲು ₹5.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. </p>.<p>ಲೋಕಾಯುಕ್ತ ಅಧಿಕಾರಿಗಳ ಸೂಚನೆಯಂತೆ ಇಬ್ಬರಿಗೂ ₹2 ಲಕ್ಷ ಮುಂಗಡ ಕೊಟ್ಟಿದ್ದ ದೂರುದಾರರು, ಬುಧವಾರ ಕಚೇರಿಯಲ್ಲಿ ₹2 ಲಕ್ಷ ಲಂಚ ಕೊಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದರು.</p>.<p>ಜಿಲ್ಲಾ ಲೋಕಾಯುಕ್ತ ಎಸ್.ಪಿ ಸ್ನೇಹಾ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಅಧಿಕಾರಿಗಳಾದ ವಿಜಯ್ಕುಮಾರ್, ಸಂದೀಪ್ಕುಮಾರ್ ಹಾಗು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>