ನಗರದ 30 ನೇ ವಾರ್ಡ್ ನಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಹೊಸ ಚರಂಡಿಗೆ ಹಾಕಲಾಗಿದ್ದ ಬ್ಲಾಕ್ ಅನ್ನು ತೆಗೆಯಲು ಈ ಕಾರ್ಮಿಕರು ಮ್ಯಾನ್ ಹೋಲ್ ಮೂಲಕ 15 ಅಡಿ ಆಳಕ್ಕೆ ಇಳಿದಿದ್ದರು. ಮೊದಲಿಗೆ ರಾಜೇಶ ಕೆಳಗೆ ಇಳಿದಿದ್ದು, ಆಯಾ ತಪ್ಪಿ ಬಿದ್ದಿದ್ದಾರೆ. ಈ ಸಂದರ್ಭ ತಲೆಗೆ ಪೆಟ್ಟಾಗಿದೆ. ಇವರನ್ನು ರಕ್ಷಿಸಲು ಉಳಿದ ಇಬ್ಬರೂ ಕೆಳಗೆ ಇಳಿದಿದ್ದು, ಉಸಿರುಗಟ್ಟಿ ಅಲ್ಲಿಯೇ ಸಾವನ್ನಪ್ಪಿದರು.