ಈ ಕುರಿತು ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಸಹ ಉಪಾಧ್ಯಕ್ಷ ಜಿ. ಶಂಕರ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದರು. "ಕಂಪನಿಯ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿದ, ಕಾರ್ಖಾನೆಯೊಳಗೆ ಅಶಿಸ್ತಿನಿಂದ ವರ್ತಿಸಿದ್ದ ನೌಕರನೊಬ್ಬನ ವಿರುದ್ಧ ಕ್ರಮ ಕೈಗೊಂಡಿದ್ದೇ ಇಷ್ಟಕ್ಕೆಲ್ಲ ಕಾರಣವಾಗಿದೆ. ಕೆಲವೇ ಕೆಲವು ಮುಖಂಡರ ಹಿತಾಸಕ್ತಿ, ಬೆದರಿಕೆ ತಂತ್ರಗಳಿಂದಾಗಿ ಉಳಿದ ಕಾರ್ಮಿಕರಿಗೂ ತೊಂದರೆ ಆಗಿದೆ. 40 ಕಾರ್ಮಿಕರ ಅಮಾನತು ಆದೇಶವನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ' ಎಂದು ಅವರು ಸ್ಪಷ್ಟಪಡಿಸಿದರು.