ಈ ಬಗ್ಗೆ ಟಿಕೆಎಂ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ. "ಮೃತ ವ್ಯಕ್ತಿ ಕಡೆಯದಾಗಿ ಜೂನ್ 23ರಂದು ಕೆಲಸಕ್ಕೆ ಹಾಜರಾಗಿದ್ದರು. ಕಳೆದ 15 ದಿನಗಳಿಂದ ಕೆಲಸಕ್ಕೆ ಬಂದಿರಲಿಲ್ಲ. ಸಿಬ್ಬಂದಿಯ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಕಾರ್ಖಾನೆ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಮಂಗಳವಾರ ಕಂಪನಿ ಎಂದಿನಂತೆ ಕಾರ್ಯ ನಿರ್ವಹಿಸಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.