ಕಾರ್ಮಿಕರ ದಿಢೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾರ್ಖಾನೆ ಆಡಳಿತ ಮಂಡಳಿಯು ಮಂಗಳವಾರ ಲಾಕೌಟ್ ಘೋಷಣೆ ಮಾಡಿತ್ತು. ಮತ್ತೊಂದೆಡೆ ಕಾರ್ಮಿಕರ ಸಂಘ ಸಹ ತನ್ನ ಬಿಗಿಪಟ್ಟು ಮುಂದುವರಿಸಿದ್ದು, ಸಿಬ್ಬಂದಿಯೊಬ್ಬರ ಅಮಾನತು ಆದೇಶ ಹಿಂಪಡೆಯಬೇಕು. ಲಾಕ್ಔಟ್ ತೆರವುಗೊಳಿಸುವುದೂ ಸೇರಿದಂತೆ ತಮ್ಮ ಬೇಡಿಕೆಗಳೂ ಈಡೇರುವವರೆಗೂ ಮುಷ್ಕರ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದೆ. ಸಂಧಾನ ಮಾತುಕತೆ ಫಲಪ್ರಧವಾಗಿಲ್ಲ. ಸಮಸ್ಯೆ ಬಗೆಹರಿಯುವವರೆಗೂ ಲಾಕ್ಔಟ್ ಮುಂದುವರಿಯಲಿದೆ ಎಂದು ಟಿಕೆಎಂನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.