ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೊಯೊಟಾ: ಡಿಸಿಎಂ ಮಧ್ಯಪ್ರವೇಶಕ್ಕೆ ಒತ್ತಾಯ

Last Updated 17 ಡಿಸೆಂಬರ್ 2020, 21:18 IST
ಅಕ್ಷರ ಗಾತ್ರ

ಬಿಡದಿ: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್‌ (ಟಿಕೆಎಂ) ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಮತ್ತು ಜಿಲ್ಲಾಡಳಿತ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ ಒತ್ತಾಯಿಸಿದ್ದಾರೆ.

‘ಕಾರ್ಮಿಕರು ತಪ್ಪು ಮಾಡಿದ್ದರೆ ಅವರಿಗೆ ಬುದ್ಧಿ ಹೇಳಿ, ಕೆಲಸ ಮಾಡಲು ಅನುವು ಮಾಡಿಕೊಡಬೇಕು. ಮುಷ್ಕರ 40ನೇ ದಿನಕ್ಕೆ ಕಾಲಿಡುತ್ತಿದೆ. ಕಾರ್ಮಿಕರು ಹಾಗೂ ಅವರು ನಂಬಿರುವ ಕುಟುಂಬ ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶೀಘ್ರವೇ ಜಿಲ್ಲಾಡಳಿತ ಮಧ್ಯೆ ಪ್ರವೇಶಿಸಬೇಕು‘ ಎಂದು ಆಗ್ರಹಿಸಿದರು.

‘ಆಡಳಿತ ಮಂಡಳಿ ಪ್ರತಿಷ್ಠೆ ಬಿಟ್ಟು ಕೆಲಸ ಆರಂಭಿಸಲು ಅವಕಾಶ ಮಾಡಿಕೊಡಬೇಕು‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT