ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಟೊಯೊಟಾ ಕಾರ್ಖಾನೆ ಮತ್ತೊಮ್ಮೆ ಲಾಕೌಟ್

Last Updated 24 ನವೆಂಬರ್ 2020, 9:27 IST
ಅಕ್ಷರ ಗಾತ್ರ

ರಾಮನಗರ: ಕಾರ್ಮಿಕರು ಹಾಗೂ ಆಡಳಿತ‌ ಮಂಡಳಿ ನಡುವಿನ ಬಿಕ್ಕಟ್ಟಿನಿಂದಾಗಿ ಬಿಡದಿಯ ಟೊಯೊಟಾ‌ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆಯು ಮತ್ತೊಮ್ಮೆ ಲಾಕೌಟ್ ಆಗಿದೆ.

ಸೋಮವಾರದಿಂದಲೇ‌ ಕಾರ್ಖಾನೆಯ ಬಾಗಿಲು ಮುಚ್ಚಲಾಗಿದೆ. ‘ಸರ್ಕಾರದ ಆದೇಶದಂತೆ ಇದೇ ತಿಂಗಳ 19ರಂದು ಕಾರ್ಖಾನೆ ಬಾಗಿಲು ತೆರೆಯಲಾಗಿತ್ತು. ಆದರೆ ನೌಕರರು‌ ಮುಷ್ಕರ ಮುಂದುವರಿಸಿದ್ದಾರೆ. ಕಾರ್ಖಾನೆಯಲ್ಲಿ‌ ಉತ್ಪಾದನಾ ಚಟುವಟಿಕೆಗಳು ನಡೆಯಲು‌ ಕನಿಷ್ಠ ನೌಕರರು ಬೇಕು. ಕಾರ್ಮಿಕರ ಕೊರತೆಯಿಂದಾಗಿ‌ ಕಾರ್ಖಾನೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ’ ಎಂದು ಕಾರ್ಖಾನೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT