ಸೋಮವಾರದಿಂದಲೇ ಕಾರ್ಖಾನೆಯ ಬಾಗಿಲು ಮುಚ್ಚಲಾಗಿದೆ. ‘ಸರ್ಕಾರದ ಆದೇಶದಂತೆ ಇದೇ ತಿಂಗಳ 19ರಂದು ಕಾರ್ಖಾನೆ ಬಾಗಿಲು ತೆರೆಯಲಾಗಿತ್ತು. ಆದರೆ ನೌಕರರು ಮುಷ್ಕರ ಮುಂದುವರಿಸಿದ್ದಾರೆ. ಕಾರ್ಖಾನೆಯಲ್ಲಿ ಉತ್ಪಾದನಾ ಚಟುವಟಿಕೆಗಳು ನಡೆಯಲು ಕನಿಷ್ಠ ನೌಕರರು ಬೇಕು. ಕಾರ್ಮಿಕರ ಕೊರತೆಯಿಂದಾಗಿ ಕಾರ್ಖಾನೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ’ ಎಂದು ಕಾರ್ಖಾನೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.