ಅಮಾನತು ಶಿಕ್ಷೆ ಕುರಿತು ಟಿಕೆಎಂ ಕಾರ್ಮಿಕ ಸಂಘ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ‘ಕಂಪನಿಯು ತನಗೆ ಸಂಬಂಧ ಇಲ್ಲದ ಹೊರಗಿನ ವಿಷಯದ ಆರೋಪದ ಮೇಲೆ ಕಾರ್ಮಿಕರನ್ನು ಅಮಾನತು ಮಾಡುವ ಮೂಲಕ ತನ್ನ ಅಸಹಾಯಕತೆಯನ್ನು ಹೊರಹಾಕಿದೆ. ಇದರ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ’ ಎಂದು ಸಂಘದ ಕಾರ್ಯದರ್ಶಿ ಬಸವರಾಜ ಹವಾಲ್ದಾರ್ ತಿಳಿಸಿದ್ದಾರೆ. ಕಾರ್ಖಾನೆ ಮುಂಭಾಗ ನೌಕರರ ಪ್ರತಿಭಟನೆಯು 26ನೇ ದಿನವಾದ ಶುಕ್ರವಾರವೂ ಮುಂದುವರಿದಿತ್ತು.