ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವೇದಿಕೆಯ ರಾಜ್ಯ ಅಧ್ಯಕ್ಷ ರಮೇಶ್ ಗೌಡ, ‘3,600 ಕಾರ್ಮಿಕರ ಬೆಂಬಲವಾಗಿ ನಾವು ಪಾದಯಾತ್ರೆ ನಡೆಸಿದ್ದೇವೆ. ನಮ್ಮ ಸಂಘದಿಂದ ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರದಲ್ಲಿಯೂ (ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಮತ್ತುಚಿಕ್ಕಬಳ್ಳಾಪುರ) ಜಿಲ್ಲಾ ಅಧ್ಯಕ್ಷರ ನೇತೃತ್ವದಲ್ಲಿ ವಿಭಿನ್ನ ರೀತಿಯ ಪ್ರತಿಭಟನೆಯನ್ನು ನಡೆಸುತ್ತೇವೆ’ ಎಂದರು.