<p><strong>ರಾಮನಗರ:</strong> ಪೊಲೀಸ್ ಇಲಾಖೆ ಸಂಚಾರ ಇ–ಚಲನ್ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳಲ್ಲಿ ಶೇ50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ನ್ಯಾಯಾಧೀಶ ಎಂ.ಎಚ್.ಅಣ್ಣಯ್ಯ ತಿಳಿಸಿದರು.</p>.<p>ನಗರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ರಿಯಾಯಿತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನ.21ರಿಂದ ಡಿ.12ರವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಕರಣ ಬಾಕಿ ಉಳಿಸಿಕೊಂಡಿರುವ ವಾಹನಗಳ ಮಾಲೀಕರು, ಸಾರ್ವಜನಿಕರು, ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸೆ.13ರಂದು ನಡೆದ ಲೋಕ ಅದಾಲತ್ ನಲ್ಲಿ ಒಟ್ಟು 8241 ಪ್ರಕರಣಗಳಲ್ಲಿ ₹29.60 ಲಕ್ಷ ಮೊತ್ತ ಪಾವತಿಯಾಗಿದೆ. ಮುಂದಿನ ಲೋಕ ಅದಾಲತ್ ಡಿ.13ರಂದು ನಡೆಯಲಿದೆ. ಸಾರಿಗೆ ಇಲಾಖೆ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಹಾಜರಾಗಿ ಕಕ್ಷಿದಾರರು ರಾಜಿ ಸಂಧಾನ ಮಾಡಿಕೊಳ್ಳಬಹುದು ಎಂದು ತಿಳಿಸಿದರು.</p>.<p>ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ಮಾತನಾಡಿ, ಇ–ಚಲನ್ಗಳ ಮೊತ್ತ ಪಾವತಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ವಿಶೇಷ ಕೌಂಟರ್ ತೆರೆಯಲಾಗುವುದು. ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ದಂಡದ ಮೊತ್ತ ಪಾವತಿಸಬಹುದು ಎಂದು ತಿಳಿಸಿದರು.<br /> ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಪೊಲೀಸ್ ಇಲಾಖೆ ಸಂಚಾರ ಇ–ಚಲನ್ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳಲ್ಲಿ ಶೇ50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ನ್ಯಾಯಾಧೀಶ ಎಂ.ಎಚ್.ಅಣ್ಣಯ್ಯ ತಿಳಿಸಿದರು.</p>.<p>ನಗರ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ರಿಯಾಯಿತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ನ.21ರಿಂದ ಡಿ.12ರವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರಕರಣ ಬಾಕಿ ಉಳಿಸಿಕೊಂಡಿರುವ ವಾಹನಗಳ ಮಾಲೀಕರು, ಸಾರ್ವಜನಿಕರು, ಕಕ್ಷಿದಾರರು ಈ ಅವಕಾಶವನ್ನು ಸದುಪಯೋಗಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಸೆ.13ರಂದು ನಡೆದ ಲೋಕ ಅದಾಲತ್ ನಲ್ಲಿ ಒಟ್ಟು 8241 ಪ್ರಕರಣಗಳಲ್ಲಿ ₹29.60 ಲಕ್ಷ ಮೊತ್ತ ಪಾವತಿಯಾಗಿದೆ. ಮುಂದಿನ ಲೋಕ ಅದಾಲತ್ ಡಿ.13ರಂದು ನಡೆಯಲಿದೆ. ಸಾರಿಗೆ ಇಲಾಖೆ ಪ್ರಕರಣಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ ಹಾಜರಾಗಿ ಕಕ್ಷಿದಾರರು ರಾಜಿ ಸಂಧಾನ ಮಾಡಿಕೊಳ್ಳಬಹುದು ಎಂದು ತಿಳಿಸಿದರು.</p>.<p>ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ಮಾತನಾಡಿ, ಇ–ಚಲನ್ಗಳ ಮೊತ್ತ ಪಾವತಿಗಾಗಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ವಿಶೇಷ ಕೌಂಟರ್ ತೆರೆಯಲಾಗುವುದು. ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ದಂಡದ ಮೊತ್ತ ಪಾವತಿಸಬಹುದು ಎಂದು ತಿಳಿಸಿದರು.<br /> ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>