ನಗರದ ಎಸ್ಪಿ ಕಚೇರಿ ಮುಂಭಾಗದಿಂದ ಹಿಡಿದು ತರಕಾರಿ ಮಾರುಕಟ್ಟೆ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕಳೆದ ಮೂರು ದಿನಗಳಿಂದ ಸರ್ಕಾರಿ ರಜೆ ಇದ್ದ ಬೆಂಗಳೂರಿನ ಜನರು ಮಂಡ್ಯ ಹಾಗೂ ಮೈಸೂರು ಮೊದಲಾದ ಕಡೆಗಳಿಗೆ ತೆರಳಿದ್ದು, ಮಧ್ಯಾಹ್ನದ ನಂತರ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ಓಡಾಟ ಹೆಚ್ಚಾಗಿತ್ತು. ಒಂದೇ ಸಮಯದಲ್ಲಿ ವಾಹನಗಳು ರಸ್ತೆಗೆ ಇಳಿದ ಕಾರಣ ಸಂಚಾರ ದಟ್ಟಣೆ ಹೆಚ್ಚಾಯಿತು.