<p><strong>ಕನಕಪುರ: </strong>ಮನುಷ್ಯನಿಗೆ ಪ್ರಾಣ ಅತ್ಯಂತ ಅಮೂಲ್ಯ. ಒಮ್ಮೆ ಜೀವ ಕಳೆದುಕೊಂಡರೆ ಹೋದ ಜೀವ ಮತ್ತೊಮ್ಮೆ ವಾಪಸು ಬರುವುದಿಲ್ಲ ಎಂದು ಎರಡನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಧೀಶ ಶಂಕರಪ್ಪ ನಿಂಬಣ್ಣ ಕಲ್ಕಣಿ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಸಾಕ್ಷರತಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೋಟಾರು ಕಾಯ್ದೆಯಡಿ ಹಲವು ಸುರಕ್ಷತಾ ಕಾನೂನುಗಳಿವೆ. ಅವುಗಳನ್ನು ಜನರಿಗೆ ತೊಂದರೆ ಕೊಡುವ ಉದ್ದೇಶದಿಂದ ಮಾಡಿಲ್ಲ. ಬದಲಾಗಿ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸುರಕ್ಷತಾ ಸಂಚಾರಕ್ಕಾಗಿ ಕಾನೂನು ಮಾಡಲಾಗಿದೆ ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಎಚ್.ಹನುಮಂತ ಮಾತನಾಡಿ, ನಾಲ್ಕು ದಿನಗಳಿಂದ ತಾಲ್ಲೂಕಿನಲ್ಲಿ ಕಾನೂನು ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ. ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು..</p>.<p>ಸಿವಿಲ್ ನ್ಯಾಯಾಧೀಶ ಸಂತೋಷಕುಮಾರ್, ತಹಶೀಲ್ದಾರ್ ಎಂ.ಆನಂದಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಕೆ.ಮಲ್ಲೇಶ್, ವಕೀಲರಾದ ರಾಮಚಂದ್ರ, ಗೋಪಾಲಗೌಡ ಇದ್ದರು.</p>.<p>ಪೊಲೀಸರು ನಗರದಲ್ಲಿ ಬೈಕ್ ಜಾಥಾ ನಡೆಸಿ ಸಂಚಾರ ನಿಯಮದ ಬಗ್ಗೆ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>ಮನುಷ್ಯನಿಗೆ ಪ್ರಾಣ ಅತ್ಯಂತ ಅಮೂಲ್ಯ. ಒಮ್ಮೆ ಜೀವ ಕಳೆದುಕೊಂಡರೆ ಹೋದ ಜೀವ ಮತ್ತೊಮ್ಮೆ ವಾಪಸು ಬರುವುದಿಲ್ಲ ಎಂದು ಎರಡನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಧೀಶ ಶಂಕರಪ್ಪ ನಿಂಬಣ್ಣ ಕಲ್ಕಣಿ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಸಾಕ್ಷರತಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೋಟಾರು ಕಾಯ್ದೆಯಡಿ ಹಲವು ಸುರಕ್ಷತಾ ಕಾನೂನುಗಳಿವೆ. ಅವುಗಳನ್ನು ಜನರಿಗೆ ತೊಂದರೆ ಕೊಡುವ ಉದ್ದೇಶದಿಂದ ಮಾಡಿಲ್ಲ. ಬದಲಾಗಿ ಸಾರ್ವಜನಿಕರ ಅನುಕೂಲಕ್ಕೆ ಹಾಗೂ ಸುರಕ್ಷತಾ ಸಂಚಾರಕ್ಕಾಗಿ ಕಾನೂನು ಮಾಡಲಾಗಿದೆ ಎಂದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಎಚ್.ಹನುಮಂತ ಮಾತನಾಡಿ, ನಾಲ್ಕು ದಿನಗಳಿಂದ ತಾಲ್ಲೂಕಿನಲ್ಲಿ ಕಾನೂನು ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ. ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು..</p>.<p>ಸಿವಿಲ್ ನ್ಯಾಯಾಧೀಶ ಸಂತೋಷಕುಮಾರ್, ತಹಶೀಲ್ದಾರ್ ಎಂ.ಆನಂದಯ್ಯ, ಸರ್ಕಲ್ ಇನ್ಸ್ಪೆಕ್ಟರ್ ಕೆ.ಮಲ್ಲೇಶ್, ವಕೀಲರಾದ ರಾಮಚಂದ್ರ, ಗೋಪಾಲಗೌಡ ಇದ್ದರು.</p>.<p>ಪೊಲೀಸರು ನಗರದಲ್ಲಿ ಬೈಕ್ ಜಾಥಾ ನಡೆಸಿ ಸಂಚಾರ ನಿಯಮದ ಬಗ್ಗೆ ಜಾಗೃತಿ ಮೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>